ಜನ ಮನದ ನಾಡಿ ಮಿಡಿತ

Advertisement

ಅಪಾಯದ ಮಟ್ಟದಲ್ಲಿ ಮೈದುಂಬಿ ಹರಿಯುತ್ತಿರುವ ನೇತ್ರಾವತಿ-ಕುಮಾರಧಾರ

ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಮಳೆಯಬ್ಬರ ಮುಂದುವರಿದಿದ್ದು, ಬುಧವಾರ ಬೆಳಿಗ್ಗೆ ಸ್ವಲ್ಪ ಬಿಡುವು ಕೊಟ್ಟ ವರುಣ ಮಧ್ಯಾಹ್ನ ನಂತರ ಮತ್ತಷ್ಟು ಬಿರುಸುಪಡೆದುಕೊಂಡಿದೆ. ಜಿಲ್ಲೆಯ ಜೀವನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ಇದೀಗ ಮೈದುಂಬಿ ಹರಿಯುತ್ತಿದ್ದು. ಅಪಾಯದ ಮಟ್ಟದತ್ತ ಸಾಗುತ್ತಿದೆ.


ಕಳೆದ ಎರಡು ದಿನಗಳಿಂದ ನೀರಿನ ಮಟ್ಟ 20 ಮೀಟರ್ ದಾಖಲಾಗಿದ್ದು, ಬುಧವಾರ ಸಂಜೆಗೆ ಜೀವನದಿಗಳ ಸಂಗಮ ಸ್ಥಾನವಾದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳದ ಬಳಿ ನದಿ ನೀರಿನ ಮಟ್ಟ 28.5ಕ್ಕೆ ಏರಿದೆ. ದೇವಳದ ಅಂಗಣ ಪ್ರವೇಶಕ್ಕೆ ಕೇವಲ 10 ಮೆಟ್ಟಲುಗಳಷ್ಟೇ ಉಳಿದಿದೆ. ನೀರಿನ ಮಟ್ಟ 31.5 ಮೀಟರ್ ಗೆ ಏರಿದರೆ ಎರಡೂ ನದಿಗಳ ನೀರು ದೇವಳದ ಎರಡೂ ಭಾಗಗಳಿಂದ ಆವರಿಸಿ ಬಂದು ಸಂಗಮವಾಗುತ್ತದೆ.
ಪಶ್ಚಿಮ ಘಟ್ಟ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಬಹಳಷ್ಟು ಏರಿಕೆಯಾಗಿದೆ. ಪುತ್ತೂರು ತಾಲೂಕಿನಲ್ಲಿಯೂ ಮಳೆಯಬ್ಬರ ಹೆಚ್ಚಾಗುತ್ತಿದೆ.
ಮಳೆಗೆ ಜತೆಯಾದ ಗಾಳಿ
ಕಳೆದ ಶನಿವಾರದಿಂದ ಮಳೆಯ ಅಬ್ಬರ ಮಾತ್ರ ಕಂಡುಬರುತ್ತಿದ್ದು, ಇದೀಗ ಮಳೆಯ ಜತೆಗೆ ಗಾಳಿಯ ಅಬ್ಬರವೂ ಸೇರಿಕೊಂಡಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!