ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಮಳೆಯಬ್ಬರ ಮುಂದುವರಿದಿದ್ದು, ಬುಧವಾರ ಬೆಳಿಗ್ಗೆ ಸ್ವಲ್ಪ ಬಿಡುವು ಕೊಟ್ಟ ವರುಣ ಮಧ್ಯಾಹ್ನ ನಂತರ ಮತ್ತಷ್ಟು ಬಿರುಸುಪಡೆದುಕೊಂಡಿದೆ. ಜಿಲ್ಲೆಯ ಜೀವನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ಇದೀಗ ಮೈದುಂಬಿ ಹರಿಯುತ್ತಿದ್ದು. ಅಪಾಯದ ಮಟ್ಟದತ್ತ ಸಾಗುತ್ತಿದೆ.
ಕಳೆದ ಎರಡು ದಿನಗಳಿಂದ ನೀರಿನ ಮಟ್ಟ 20 ಮೀಟರ್ ದಾಖಲಾಗಿದ್ದು, ಬುಧವಾರ ಸಂಜೆಗೆ ಜೀವನದಿಗಳ ಸಂಗಮ ಸ್ಥಾನವಾದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳದ ಬಳಿ ನದಿ ನೀರಿನ ಮಟ್ಟ 28.5ಕ್ಕೆ ಏರಿದೆ. ದೇವಳದ ಅಂಗಣ ಪ್ರವೇಶಕ್ಕೆ ಕೇವಲ 10 ಮೆಟ್ಟಲುಗಳಷ್ಟೇ ಉಳಿದಿದೆ. ನೀರಿನ ಮಟ್ಟ 31.5 ಮೀಟರ್ ಗೆ ಏರಿದರೆ ಎರಡೂ ನದಿಗಳ ನೀರು ದೇವಳದ ಎರಡೂ ಭಾಗಗಳಿಂದ ಆವರಿಸಿ ಬಂದು ಸಂಗಮವಾಗುತ್ತದೆ.
ಪಶ್ಚಿಮ ಘಟ್ಟ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಬಹಳಷ್ಟು ಏರಿಕೆಯಾಗಿದೆ. ಪುತ್ತೂರು ತಾಲೂಕಿನಲ್ಲಿಯೂ ಮಳೆಯಬ್ಬರ ಹೆಚ್ಚಾಗುತ್ತಿದೆ.
ಮಳೆಗೆ ಜತೆಯಾದ ಗಾಳಿ
ಕಳೆದ ಶನಿವಾರದಿಂದ ಮಳೆಯ ಅಬ್ಬರ ಮಾತ್ರ ಕಂಡುಬರುತ್ತಿದ್ದು, ಇದೀಗ ಮಳೆಯ ಜತೆಗೆ ಗಾಳಿಯ ಅಬ್ಬರವೂ ಸೇರಿಕೊಂಡಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…