ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಮಳೆಯಬ್ಬರ ಮುಂದುವರಿದಿದ್ದು, ಬುಧವಾರ ಬೆಳಿಗ್ಗೆ ಸ್ವಲ್ಪ ಬಿಡುವು ಕೊಟ್ಟ ವರುಣ ಮಧ್ಯಾಹ್ನ ನಂತರ ಮತ್ತಷ್ಟು ಬಿರುಸುಪಡೆದುಕೊಂಡಿದೆ. ಜಿಲ್ಲೆಯ ಜೀವನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ಇದೀಗ ಮೈದುಂಬಿ ಹರಿಯುತ್ತಿದ್ದು. ಅಪಾಯದ ಮಟ್ಟದತ್ತ ಸಾಗುತ್ತಿದೆ.
ಕಳೆದ ಎರಡು ದಿನಗಳಿಂದ ನೀರಿನ ಮಟ್ಟ 20 ಮೀಟರ್ ದಾಖಲಾಗಿದ್ದು, ಬುಧವಾರ ಸಂಜೆಗೆ ಜೀವನದಿಗಳ ಸಂಗಮ ಸ್ಥಾನವಾದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳದ ಬಳಿ ನದಿ ನೀರಿನ ಮಟ್ಟ 28.5ಕ್ಕೆ ಏರಿದೆ. ದೇವಳದ ಅಂಗಣ ಪ್ರವೇಶಕ್ಕೆ ಕೇವಲ 10 ಮೆಟ್ಟಲುಗಳಷ್ಟೇ ಉಳಿದಿದೆ. ನೀರಿನ ಮಟ್ಟ 31.5 ಮೀಟರ್ ಗೆ ಏರಿದರೆ ಎರಡೂ ನದಿಗಳ ನೀರು ದೇವಳದ ಎರಡೂ ಭಾಗಗಳಿಂದ ಆವರಿಸಿ ಬಂದು ಸಂಗಮವಾಗುತ್ತದೆ.
ಪಶ್ಚಿಮ ಘಟ್ಟ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಬಹಳಷ್ಟು ಏರಿಕೆಯಾಗಿದೆ. ಪುತ್ತೂರು ತಾಲೂಕಿನಲ್ಲಿಯೂ ಮಳೆಯಬ್ಬರ ಹೆಚ್ಚಾಗುತ್ತಿದೆ.
ಮಳೆಗೆ ಜತೆಯಾದ ಗಾಳಿ
ಕಳೆದ ಶನಿವಾರದಿಂದ ಮಳೆಯ ಅಬ್ಬರ ಮಾತ್ರ ಕಂಡುಬರುತ್ತಿದ್ದು, ಇದೀಗ ಮಳೆಯ ಜತೆಗೆ ಗಾಳಿಯ ಅಬ್ಬರವೂ ಸೇರಿಕೊಂಡಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…