ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಮಳೆಯಬ್ಬರ ಮುಂದುವರಿದಿದ್ದು, ಬುಧವಾರ ಬೆಳಿಗ್ಗೆ ಸ್ವಲ್ಪ ಬಿಡುವು ಕೊಟ್ಟ ವರುಣ ಮಧ್ಯಾಹ್ನ ನಂತರ ಮತ್ತಷ್ಟು ಬಿರುಸುಪಡೆದುಕೊಂಡಿದೆ. ಜಿಲ್ಲೆಯ ಜೀವನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ಇದೀಗ ಮೈದುಂಬಿ ಹರಿಯುತ್ತಿದ್ದು. ಅಪಾಯದ ಮಟ್ಟದತ್ತ ಸಾಗುತ್ತಿದೆ.
ಕಳೆದ ಎರಡು ದಿನಗಳಿಂದ ನೀರಿನ ಮಟ್ಟ 20 ಮೀಟರ್ ದಾಖಲಾಗಿದ್ದು, ಬುಧವಾರ ಸಂಜೆಗೆ ಜೀವನದಿಗಳ ಸಂಗಮ ಸ್ಥಾನವಾದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳದ ಬಳಿ ನದಿ ನೀರಿನ ಮಟ್ಟ 28.5ಕ್ಕೆ ಏರಿದೆ. ದೇವಳದ ಅಂಗಣ ಪ್ರವೇಶಕ್ಕೆ ಕೇವಲ 10 ಮೆಟ್ಟಲುಗಳಷ್ಟೇ ಉಳಿದಿದೆ. ನೀರಿನ ಮಟ್ಟ 31.5 ಮೀಟರ್ ಗೆ ಏರಿದರೆ ಎರಡೂ ನದಿಗಳ ನೀರು ದೇವಳದ ಎರಡೂ ಭಾಗಗಳಿಂದ ಆವರಿಸಿ ಬಂದು ಸಂಗಮವಾಗುತ್ತದೆ.
ಪಶ್ಚಿಮ ಘಟ್ಟ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಬಹಳಷ್ಟು ಏರಿಕೆಯಾಗಿದೆ. ಪುತ್ತೂರು ತಾಲೂಕಿನಲ್ಲಿಯೂ ಮಳೆಯಬ್ಬರ ಹೆಚ್ಚಾಗುತ್ತಿದೆ.
ಮಳೆಗೆ ಜತೆಯಾದ ಗಾಳಿ
ಕಳೆದ ಶನಿವಾರದಿಂದ ಮಳೆಯ ಅಬ್ಬರ ಮಾತ್ರ ಕಂಡುಬರುತ್ತಿದ್ದು, ಇದೀಗ ಮಳೆಯ ಜತೆಗೆ ಗಾಳಿಯ ಅಬ್ಬರವೂ ಸೇರಿಕೊಂಡಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…