ಜನ ಮನದ ನಾಡಿ ಮಿಡಿತ

Advertisement

ದೇರಳಕಟ್ಟೆ: ಶಾಲಾ ದ್ವಾರದ ಬಳಿ ವಿದ್ಯುತ್ ತಂತಿ ಮೇಲೆ ಉರಳಿದ ತೆಂಗಿನ ಮರ: ತಪ್ಪಿದ ಅನಾಹುತ


ಕೊಣಾಜೆ: ಭಾರೀ ಗಾಳಿ ಮಳೆಗೆ ದೇರಳಕಟ್ಟೆಯ ನೇತಾಜಿ ಸುಭಾಶ್ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯ ಗೇಟ್ ಬಳಿ ಇದ್ದ ತೆಂಗಿನ ಮರವೊಂದು ವಿದ್ಯುತ್ ತಂತಿ‌ಗೆ ಬಿದ್ದು ನೆಲಕ್ಕುರುಳಿದ ಘಟನೆ ಶುಕ್ರವಾರ ಸಂಭವಿಸಿದೆ.


ಶುಕ್ರವಾರ ಬೆಳಿಗ್ಗೆ ಶಾಲೆ ಆರಂಭವಾಗುವ ಮುನ್ನ ಗಾಳಿ ಮಳೆಗೆ ತೆಂಗಿನ ಮರವು ವಿದ್ಯುತ್ ತಂತಿ ಮೇಲೆ ಉರುಳಿ ಬಿದ್ದಿದ್ದು ಈ ಸಂದರ್ಭದಲ್ಲಿ ವಿದ್ಯುತ್ ಕಂಬ ಸಹಿತ ಮರವು ನೆಲಕ್ಕುರುಳಿದೆ. ಈ ಸಂದರ್ಭದಲ್ಲಿ ಕೆಲವು ಶಾಲೆಯೊಳಗಿದ್ದು, ಶಾಲಾ ಗೇಟ್ ಬಳಿ ಯಾವ ವಿದ್ಯಾರ್ಥಿಗಳೂ ಇರಲಿರಲಿಲ್ಲ. ಆದರೆ ತೆಂಗಿನ ಮರ ಉರುಳುವ ಒಂದು ನಿಮಿಷ ಮುಂಚೆಯಷ್ಟೇ ವಿದ್ಯಾರ್ಥಿಗಳು ತುಂಬಿದ್ದ ಅಟೋ ರಿಕ್ಷಾ ವೊಂದು ಇದೇ ದ್ವಾರದ ಬಂದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸದೆ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಬಳಿಕ ಕೂಡಲೆ ಶಾಲಾ ಶಿಕ್ಷಕರು ಹಾಗೂ ಸಾರ್ವಜನಿಕರು ಗಮನ‌ಹರಿಸಿ ಮೆಸ್ಕಾಂ ಮಾಹಿತಿ ನೀಡಿ ಮರ ಹಾಗೂ ವಿದ್ಯುತ್ ತಂತಿಗಳನ್ನು ತೆರವು ಗೊಳಿಸಿದ್ದಾರೆ. ವಿದ್ಯುತ್ ತಂತಿ ಹಾಗೂ ಮರ ತೆರವು ಗೊಳಿಸಲು ಸಮಯ ಹಿಡಿದಿದ್ದು ಗೇಟ್ ನ ಒಳಗಿದ್ದ ಮಕ್ಕಳನ್ನು ಪಾಲಕರೊಂದಿಗೆ ಮನೆಗೆ ಕಳುಹಿಸಲಾಗಿದ್ದು, ಶಾಲಾ ಒಳಗಿದ್ದ ಮಕ್ಕಳಿಗೆ ಮಾತ್ರ ಪಾಠ ಮಾಡಲಾಗಿತ್ತು. ಮರ ತೆರವು ಗೊಳಿಸುವ ವೇಳೆ ಶಾಲಾ ಗೇಟ್ ಬಳಿ ಇದ್ದ ಇನ್ನೆರಡು ತೆಂಗಿನ ಮರಗಳನ್ನೂ ಮುನ್ನೆಚ್ಚರಿಕೆಯಾಗಿ ಕಡಿದು ತೆರವುಗೊಳಿಸಲಾಯಿತು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!