ಕೊಣಾಜೆ: ಭಾರೀ ಗಾಳಿ ಮಳೆಗೆ ದೇರಳಕಟ್ಟೆಯ ನೇತಾಜಿ ಸುಭಾಶ್ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯ ಗೇಟ್ ಬಳಿ ಇದ್ದ ತೆಂಗಿನ ಮರವೊಂದು ವಿದ್ಯುತ್ ತಂತಿಗೆ ಬಿದ್ದು ನೆಲಕ್ಕುರುಳಿದ ಘಟನೆ ಶುಕ್ರವಾರ ಸಂಭವಿಸಿದೆ.
ಶುಕ್ರವಾರ ಬೆಳಿಗ್ಗೆ ಶಾಲೆ ಆರಂಭವಾಗುವ ಮುನ್ನ ಗಾಳಿ ಮಳೆಗೆ ತೆಂಗಿನ ಮರವು ವಿದ್ಯುತ್ ತಂತಿ ಮೇಲೆ ಉರುಳಿ ಬಿದ್ದಿದ್ದು ಈ ಸಂದರ್ಭದಲ್ಲಿ ವಿದ್ಯುತ್ ಕಂಬ ಸಹಿತ ಮರವು ನೆಲಕ್ಕುರುಳಿದೆ. ಈ ಸಂದರ್ಭದಲ್ಲಿ ಕೆಲವು ಶಾಲೆಯೊಳಗಿದ್ದು, ಶಾಲಾ ಗೇಟ್ ಬಳಿ ಯಾವ ವಿದ್ಯಾರ್ಥಿಗಳೂ ಇರಲಿರಲಿಲ್ಲ. ಆದರೆ ತೆಂಗಿನ ಮರ ಉರುಳುವ ಒಂದು ನಿಮಿಷ ಮುಂಚೆಯಷ್ಟೇ ವಿದ್ಯಾರ್ಥಿಗಳು ತುಂಬಿದ್ದ ಅಟೋ ರಿಕ್ಷಾ ವೊಂದು ಇದೇ ದ್ವಾರದ ಬಂದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸದೆ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಬಳಿಕ ಕೂಡಲೆ ಶಾಲಾ ಶಿಕ್ಷಕರು ಹಾಗೂ ಸಾರ್ವಜನಿಕರು ಗಮನಹರಿಸಿ ಮೆಸ್ಕಾಂ ಮಾಹಿತಿ ನೀಡಿ ಮರ ಹಾಗೂ ವಿದ್ಯುತ್ ತಂತಿಗಳನ್ನು ತೆರವು ಗೊಳಿಸಿದ್ದಾರೆ. ವಿದ್ಯುತ್ ತಂತಿ ಹಾಗೂ ಮರ ತೆರವು ಗೊಳಿಸಲು ಸಮಯ ಹಿಡಿದಿದ್ದು ಗೇಟ್ ನ ಒಳಗಿದ್ದ ಮಕ್ಕಳನ್ನು ಪಾಲಕರೊಂದಿಗೆ ಮನೆಗೆ ಕಳುಹಿಸಲಾಗಿದ್ದು, ಶಾಲಾ ಒಳಗಿದ್ದ ಮಕ್ಕಳಿಗೆ ಮಾತ್ರ ಪಾಠ ಮಾಡಲಾಗಿತ್ತು. ಮರ ತೆರವು ಗೊಳಿಸುವ ವೇಳೆ ಶಾಲಾ ಗೇಟ್ ಬಳಿ ಇದ್ದ ಇನ್ನೆರಡು ತೆಂಗಿನ ಮರಗಳನ್ನೂ ಮುನ್ನೆಚ್ಚರಿಕೆಯಾಗಿ ಕಡಿದು ತೆರವುಗೊಳಿಸಲಾಯಿತು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…