ಕೊಣಾಜೆ: ಭಾರೀ ಗಾಳಿ ಮಳೆಗೆ ದೇರಳಕಟ್ಟೆಯ ನೇತಾಜಿ ಸುಭಾಶ್ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯ ಗೇಟ್ ಬಳಿ ಇದ್ದ ತೆಂಗಿನ ಮರವೊಂದು ವಿದ್ಯುತ್ ತಂತಿಗೆ ಬಿದ್ದು ನೆಲಕ್ಕುರುಳಿದ ಘಟನೆ ಶುಕ್ರವಾರ ಸಂಭವಿಸಿದೆ.
ಶುಕ್ರವಾರ ಬೆಳಿಗ್ಗೆ ಶಾಲೆ ಆರಂಭವಾಗುವ ಮುನ್ನ ಗಾಳಿ ಮಳೆಗೆ ತೆಂಗಿನ ಮರವು ವಿದ್ಯುತ್ ತಂತಿ ಮೇಲೆ ಉರುಳಿ ಬಿದ್ದಿದ್ದು ಈ ಸಂದರ್ಭದಲ್ಲಿ ವಿದ್ಯುತ್ ಕಂಬ ಸಹಿತ ಮರವು ನೆಲಕ್ಕುರುಳಿದೆ. ಈ ಸಂದರ್ಭದಲ್ಲಿ ಕೆಲವು ಶಾಲೆಯೊಳಗಿದ್ದು, ಶಾಲಾ ಗೇಟ್ ಬಳಿ ಯಾವ ವಿದ್ಯಾರ್ಥಿಗಳೂ ಇರಲಿರಲಿಲ್ಲ. ಆದರೆ ತೆಂಗಿನ ಮರ ಉರುಳುವ ಒಂದು ನಿಮಿಷ ಮುಂಚೆಯಷ್ಟೇ ವಿದ್ಯಾರ್ಥಿಗಳು ತುಂಬಿದ್ದ ಅಟೋ ರಿಕ್ಷಾ ವೊಂದು ಇದೇ ದ್ವಾರದ ಬಂದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸದೆ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಬಳಿಕ ಕೂಡಲೆ ಶಾಲಾ ಶಿಕ್ಷಕರು ಹಾಗೂ ಸಾರ್ವಜನಿಕರು ಗಮನಹರಿಸಿ ಮೆಸ್ಕಾಂ ಮಾಹಿತಿ ನೀಡಿ ಮರ ಹಾಗೂ ವಿದ್ಯುತ್ ತಂತಿಗಳನ್ನು ತೆರವು ಗೊಳಿಸಿದ್ದಾರೆ. ವಿದ್ಯುತ್ ತಂತಿ ಹಾಗೂ ಮರ ತೆರವು ಗೊಳಿಸಲು ಸಮಯ ಹಿಡಿದಿದ್ದು ಗೇಟ್ ನ ಒಳಗಿದ್ದ ಮಕ್ಕಳನ್ನು ಪಾಲಕರೊಂದಿಗೆ ಮನೆಗೆ ಕಳುಹಿಸಲಾಗಿದ್ದು, ಶಾಲಾ ಒಳಗಿದ್ದ ಮಕ್ಕಳಿಗೆ ಮಾತ್ರ ಪಾಠ ಮಾಡಲಾಗಿತ್ತು. ಮರ ತೆರವು ಗೊಳಿಸುವ ವೇಳೆ ಶಾಲಾ ಗೇಟ್ ಬಳಿ ಇದ್ದ ಇನ್ನೆರಡು ತೆಂಗಿನ ಮರಗಳನ್ನೂ ಮುನ್ನೆಚ್ಚರಿಕೆಯಾಗಿ ಕಡಿದು ತೆರವುಗೊಳಿಸಲಾಯಿತು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…