ಕೊಣಾಜೆ: ಭಾರೀ ಗಾಳಿ ಮಳೆಗೆ ದೇರಳಕಟ್ಟೆಯ ನೇತಾಜಿ ಸುಭಾಶ್ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯ ಗೇಟ್ ಬಳಿ ಇದ್ದ ತೆಂಗಿನ ಮರವೊಂದು ವಿದ್ಯುತ್ ತಂತಿಗೆ ಬಿದ್ದು ನೆಲಕ್ಕುರುಳಿದ ಘಟನೆ ಶುಕ್ರವಾರ ಸಂಭವಿಸಿದೆ.
ಶುಕ್ರವಾರ ಬೆಳಿಗ್ಗೆ ಶಾಲೆ ಆರಂಭವಾಗುವ ಮುನ್ನ ಗಾಳಿ ಮಳೆಗೆ ತೆಂಗಿನ ಮರವು ವಿದ್ಯುತ್ ತಂತಿ ಮೇಲೆ ಉರುಳಿ ಬಿದ್ದಿದ್ದು ಈ ಸಂದರ್ಭದಲ್ಲಿ ವಿದ್ಯುತ್ ಕಂಬ ಸಹಿತ ಮರವು ನೆಲಕ್ಕುರುಳಿದೆ. ಈ ಸಂದರ್ಭದಲ್ಲಿ ಕೆಲವು ಶಾಲೆಯೊಳಗಿದ್ದು, ಶಾಲಾ ಗೇಟ್ ಬಳಿ ಯಾವ ವಿದ್ಯಾರ್ಥಿಗಳೂ ಇರಲಿರಲಿಲ್ಲ. ಆದರೆ ತೆಂಗಿನ ಮರ ಉರುಳುವ ಒಂದು ನಿಮಿಷ ಮುಂಚೆಯಷ್ಟೇ ವಿದ್ಯಾರ್ಥಿಗಳು ತುಂಬಿದ್ದ ಅಟೋ ರಿಕ್ಷಾ ವೊಂದು ಇದೇ ದ್ವಾರದ ಬಂದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸದೆ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಬಳಿಕ ಕೂಡಲೆ ಶಾಲಾ ಶಿಕ್ಷಕರು ಹಾಗೂ ಸಾರ್ವಜನಿಕರು ಗಮನಹರಿಸಿ ಮೆಸ್ಕಾಂ ಮಾಹಿತಿ ನೀಡಿ ಮರ ಹಾಗೂ ವಿದ್ಯುತ್ ತಂತಿಗಳನ್ನು ತೆರವು ಗೊಳಿಸಿದ್ದಾರೆ. ವಿದ್ಯುತ್ ತಂತಿ ಹಾಗೂ ಮರ ತೆರವು ಗೊಳಿಸಲು ಸಮಯ ಹಿಡಿದಿದ್ದು ಗೇಟ್ ನ ಒಳಗಿದ್ದ ಮಕ್ಕಳನ್ನು ಪಾಲಕರೊಂದಿಗೆ ಮನೆಗೆ ಕಳುಹಿಸಲಾಗಿದ್ದು, ಶಾಲಾ ಒಳಗಿದ್ದ ಮಕ್ಕಳಿಗೆ ಮಾತ್ರ ಪಾಠ ಮಾಡಲಾಗಿತ್ತು. ಮರ ತೆರವು ಗೊಳಿಸುವ ವೇಳೆ ಶಾಲಾ ಗೇಟ್ ಬಳಿ ಇದ್ದ ಇನ್ನೆರಡು ತೆಂಗಿನ ಮರಗಳನ್ನೂ ಮುನ್ನೆಚ್ಚರಿಕೆಯಾಗಿ ಕಡಿದು ತೆರವುಗೊಳಿಸಲಾಯಿತು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…