ಜನ ಮನದ ನಾಡಿ ಮಿಡಿತ

Advertisement

ಹೆಬ್ರಿ: ಹೊಳೆ ದಾಟುತ್ತಿದ್ದ ವೇಳೆ ಹಗ್ಗ ತುಂಡಾಗಿ ನೀರಿನಲ್ಲಿ ಕೊಚ್ಚಿ ಹೋದ ಕಾರ್ಮಿಕ


ಉಡುಪಿ: ಕೂಲಿ ಕಾರ್ಮಿಕನೋರ್ವ ಹೊಳೆನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಚೀರೊಳ್ಳಿ ಎಂಬಲ್ಲಿ ನಡೆದಿದೆ.

ಕೂಲಿ ಕಾರ್ಮಿಕನ್ನು ತುಮಕೂರು ಮೂಲದ ಆನಂದ್ (45) ಎಂದು ಗುರುತಿಸಲಾಗಿದೆ. ಇವರು ಕೆಲಸ ಮಾಡುವ ಮನೆಗೆ ತೆರಳಲು ಸೀತಾನದಿಯ ಉಪನದಿಯನ್ನು ದಾಟಿ ಹೋಗಬೇಕಿತ್ತು. ಹಗ್ಗದ ಸಹಾಯದಿಂದ ಹೊಳೆ ದಾಟುತ್ತಿದ್ದಾಗ ಹಗ್ಗ ತುಂಡಾಗಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ.
ಇವರು ನಾಡ್ಪಾಲಿನ ಮನೋರಮಾ ಹೆಗ್ಡೆ ಎಂಬವರಿಗೆ ಸೇರಿದ ತೋಟದಲ್ಲಿ ಕಳೆದ ಹಲವಾರು ವರ್ಷಗಳಿಂದ ದುಡಿಯುತ್ತಿದ್ದರು. ತೋಟದ ಮನೆಯಿಂದ ಹೊಳೆ ದಾಟಿ ಬರಲು ಕಾಲುಸೇತುವೆ ಸಹಿತ ಯಾವುದೇ ಮೂಲ ಸೌಕರ್ಯವನ್ನು ಈ ತನಕ ಕಲ್ಪಿಸಲಾಗಿಲ್ಲ. ಹಾಗಾಗಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಹೆಬ್ರಿ ಪೊಲೀಸ್ ಸಬ್ ಇನ್ಸ್ ಫೆಕ್ಟರ್ ಮಹೇಶ್ ಟಿಎಂ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!