ಮುಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಕುಂಜೆ ಗ್ರಾಮದ ನೀರಲ್ಕೆ ಎಂಬಲ್ಲಿ ಮನೆಯೊಂದರಿಂದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ಕಳ್ಳತನ ಮಾಡಿದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆ ಇಂದಾವರ ಉಪ್ಪಳ್ಳಿ ಮಸೀದಿ ಬಳಿಯ ನಿವಾಸಿ ಅಬೂಬಕರ್ ಯಾನೆ ಆಲಿಯಾಸ್ ಇತ್ತೆ ಬರ್ಪೆ ಅಬೂಬಕ್ಕರ್ (69) ಎಂದು ಗುರುತಿಸಲಾಗಿದೆ. ಜುಲೈ 3ರಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಕುಂಜೆ
ಗ್ರಾಮದ ನೀರಲ್ಕೆ ಎಂಬಲ್ಲಿ ಸ್ಥಳೀಯ ನಿವಾಸಿ ಸಾಗೀರ ಎಂಬವರ ಮನೆಯ ಹಿಂಭಾಗಲಿನ ಚಿಲಕ ಮುರಿದು ಮನೆಯ ಕಪಾಟಿನ ಒಳಗಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿ ಚಿನ್ನಾಭರಣಗಳನ್ನು ಕಳವು ಮಾಡಿದ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಲ್ಕಿ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ವಿದ್ಯಾಧರ್ ಹಾಗೂ ಎಸ್ಐ ವಿನಾಯಕ್ ಬಾವಿಕಟ್ಟೆ ತೀವ್ರ ತನಿಖೆ ನಡೆಸಿ ಜುಲೈ 20ರಂದು ಆರೋಪಿ ಅಬೂಬಕ್ಕರ್ ನನ್ನು ದಸ್ತಗಿರಿ ಮಾಡಿದ್ದು ಆರೋಪಿಯಿಂದ ಪ್ರಕರಣದ ಕಳವಿಗೆ ಸಂಬಂಧಿಸಿದ ಕಳವು ಕೃತ್ಯಕ್ಕೆ ಉಪಯೋಗಿಸಿದ ಟಿವಿಎಸ್ ಜುಪಿಟರ್ ಸ್ಕೂಟರ್ ಮತ್ತು 6.250 ಗ್ರಾಂ ತೂಕ ಚಿನ್ನದ ಬ್ರಾಸ್ ಲೈಟ್ -1.1.160 ಗ್ರಾಂ ತೂಕ ಚಿನ್ನದ ಉಂಗುರ -1 1.190 ಗ್ರಾಂ ತೂಕ ಚಿನ್ನದ ಉಂಗುರ 2,1.220 ಗ್ರಾಂ ತೂಕದ ಚಿನ್ನದ ಉಂಗುರ-1, 2.840 ಗ್ರಾಂ ತೂಕ ಚಿನ್ನದ ಮುತ್ತಿನ ಸರ-1, 2.150 ಗ್ರಾಂ ತೂಕ ಚಿನ್ನದ ಕಿವಿಯೋಲೆ -1, ಸೇರಿ ಒಟ್ಟು 16 ಗ್ರಾಂ ಚಿನ್ನಾಭರಣಗಳನ್ನು ಮತ್ತು ಸ್ಕ್ರೂ ಡ್ರೈವರ್, ಕಬ್ಬಿಣದ ರಾಡ್, ಟಾರ್ಚ್ ಲೈಟ್ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯಿಂದ ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,39, 400/ಎಂದು ಅಂದಾಜಿಸಲಾಗಿದೆ.
ಪ್ರಕರಣದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಐ.ಪಿ.ಎಸ್ ರವರ ಮಾರ್ಗದರ್ಶನದಂತೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಮುಲ್ಕಿ ಪೊಲೀಸ್ ಠಾಣಾ ಸಿಬ್ಬಂದಿ ಸಹಕರಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…