ಮುಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಕುಂಜೆ ಗ್ರಾಮದ ನೀರಲ್ಕೆ ಎಂಬಲ್ಲಿ ಮನೆಯೊಂದರಿಂದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ಕಳ್ಳತನ ಮಾಡಿದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆ ಇಂದಾವರ ಉಪ್ಪಳ್ಳಿ ಮಸೀದಿ ಬಳಿಯ ನಿವಾಸಿ ಅಬೂಬಕರ್ ಯಾನೆ ಆಲಿಯಾಸ್ ಇತ್ತೆ ಬರ್ಪೆ ಅಬೂಬಕ್ಕರ್ (69) ಎಂದು ಗುರುತಿಸಲಾಗಿದೆ. ಜುಲೈ 3ರಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಕುಂಜೆ
ಗ್ರಾಮದ ನೀರಲ್ಕೆ ಎಂಬಲ್ಲಿ ಸ್ಥಳೀಯ ನಿವಾಸಿ ಸಾಗೀರ ಎಂಬವರ ಮನೆಯ ಹಿಂಭಾಗಲಿನ ಚಿಲಕ ಮುರಿದು ಮನೆಯ ಕಪಾಟಿನ ಒಳಗಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿ ಚಿನ್ನಾಭರಣಗಳನ್ನು ಕಳವು ಮಾಡಿದ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಲ್ಕಿ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ವಿದ್ಯಾಧರ್ ಹಾಗೂ ಎಸ್ಐ ವಿನಾಯಕ್ ಬಾವಿಕಟ್ಟೆ ತೀವ್ರ ತನಿಖೆ ನಡೆಸಿ ಜುಲೈ 20ರಂದು ಆರೋಪಿ ಅಬೂಬಕ್ಕರ್ ನನ್ನು ದಸ್ತಗಿರಿ ಮಾಡಿದ್ದು ಆರೋಪಿಯಿಂದ ಪ್ರಕರಣದ ಕಳವಿಗೆ ಸಂಬಂಧಿಸಿದ ಕಳವು ಕೃತ್ಯಕ್ಕೆ ಉಪಯೋಗಿಸಿದ ಟಿವಿಎಸ್ ಜುಪಿಟರ್ ಸ್ಕೂಟರ್ ಮತ್ತು 6.250 ಗ್ರಾಂ ತೂಕ ಚಿನ್ನದ ಬ್ರಾಸ್ ಲೈಟ್ -1.1.160 ಗ್ರಾಂ ತೂಕ ಚಿನ್ನದ ಉಂಗುರ -1 1.190 ಗ್ರಾಂ ತೂಕ ಚಿನ್ನದ ಉಂಗುರ 2,1.220 ಗ್ರಾಂ ತೂಕದ ಚಿನ್ನದ ಉಂಗುರ-1, 2.840 ಗ್ರಾಂ ತೂಕ ಚಿನ್ನದ ಮುತ್ತಿನ ಸರ-1, 2.150 ಗ್ರಾಂ ತೂಕ ಚಿನ್ನದ ಕಿವಿಯೋಲೆ -1, ಸೇರಿ ಒಟ್ಟು 16 ಗ್ರಾಂ ಚಿನ್ನಾಭರಣಗಳನ್ನು ಮತ್ತು ಸ್ಕ್ರೂ ಡ್ರೈವರ್, ಕಬ್ಬಿಣದ ರಾಡ್, ಟಾರ್ಚ್ ಲೈಟ್ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯಿಂದ ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,39, 400/ಎಂದು ಅಂದಾಜಿಸಲಾಗಿದೆ.
ಪ್ರಕರಣದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಐ.ಪಿ.ಎಸ್ ರವರ ಮಾರ್ಗದರ್ಶನದಂತೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಮುಲ್ಕಿ ಪೊಲೀಸ್ ಠಾಣಾ ಸಿಬ್ಬಂದಿ ಸಹಕರಿಸಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…