ಮುಲ್ಕಿ : ಅರಮನೆ ವೆಲ್ಫೇರ್ ಟ್ರಸ್ಟ್ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಪಡುಪಣಂಬೂರು ಮುಲ್ಕಿ ಸೀಮೆ ಅರಮನೆಯ ಧರ್ಮ ಚಾವಡಿಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಏಷ್ಯಾ ನೆಟ್ ಸುವರ್ಣ ನ್ಯೂಸ್ ನ ಮುಖ್ಯ ನಿರೂಪಕಿ ಭಾವನಾ ನಾಗಯ್ಯ ಮಾತನಾಡಿ ಮುಲ್ಕಿ ಸೀಮೆಯ ಅರಸು ಮನೆತನ ವಿಶಿಷ್ಟ ಪರಂಪರೆಯನ್ನು ಹೊಂದಿದ್ದು ಇದರಿಂದಾಗಿ ಸೀಮೆಯಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿ ಬೆಳಗಿದೆ. ಸಂಸ್ಥಾನಗಳು ಬೆಳಗಿದ ದಾರಿಯಿಂದ ಪ್ರಾಂತ್ಯಗಳ ಬೆಳವಣಿಗೆಗೆ ದಾರಿದೀಪವಾಗಿದೆ ಎಂದರು.ವೇದಿಕೆಯಲ್ಲಿ ಏಷ್ಯಾ ನೆಟ್ ಸುವರ್ಣ ಸಂಸ್ಥೆಯ ಹಿರಿಯ ನಿರೂಪಕಿ ಶ್ವೇತಾ ಆಚಾರ್ಯ, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್,ವಿನೋದ್ ಸಾಲ್ಯಾನ್ ಬೆಳ್ಳಾಯರು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ಪಾರಂಪರಿಕ ವೈದ್ಯರಾದ ಜ್ಯೋತಿಶ್ಚ0ದ್ರ ಭಟ್ ಹಾಗೂ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಆಡಳಿತ ಮೊಕ್ತೇಸರರಾಗಿ ನೇಮಕಗೊಂಡ ಗುರುರಾಜ್ ಎಸ್.ಪೂಜಾರಿ ರವರನ್ನು ಗೌರವಿಸಲಾಯಿತು.ವಿನೋದ್ ಸಾಲ್ಯಾನ್ ಬೆಳ್ಳಾಯರು ನಿರೂಪಿಸಿದರು
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…