ಜನ ಮನದ ನಾಡಿ ಮಿಡಿತ

Advertisement

ತುಳು ಸಾಹಿತ್ಯ ಅಕಾಡೆಮಿ 30ನೇ ವರ್ಷದ ಸಂಭ್ರಮಾಚರಣೆ, ನೂತನ ಸಭಾಂಗಣ ಲೋಕಾರ್ಪಣೆ

ದಕ್ಷಿಣ ಕನ್ನಡ: ತುಳುಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಭಾಂಗಣದಲ್ಲಿ, ಅಕಾಡೆಮಿಯ 30ನೇ ವರ್ಷದ ಸಂಭ್ರಮಾಚರಣೆ ಮತ್ತು ಸಭಾಂಗಣ ಉದ್ಘಾಟನೆ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆ, ಸಂಸ್ಕೃತಿ ಅಧ್ಯಯನ, ದಾಖಲೀಕರಣ ಮಾಡುವ ಯೋಜನೆ ಹೊಂದಿದೆ.

ತುಳುಭವನವನ್ನು ತುಳುನಾಡಿನ ಸಾಂಸ್ಕೃತಿಕ ಕೇಂದ್ರವನ್ನಾಗಿ ರೂಪಿಸಲಿದ್ದೇವೆ. ಮ್ಯೂಸಿಯಂ ಆರಂಭಿಸಲಿದ್ದೇವೆ’ ಎಂದರು ಸಭಾಂಗಣವನ್ನು ಉದ್ಘಾಟಿಸಿದ ಮಾಜಿ ಸಚಿವ ಬಿ.ರಮಾನಾಥ ರೈ, ‘ಸಮಾಜದಲ್ಲಿ ಸಾಮರಸ್ಯ ತರುವ ಶಕ್ತಿ ತುಳು ಭಾಷೆಗಿದೆ. ಪಂಚದ್ರಾವಿಡ ಭಾಷೆಗಳಲ್ಲೊಂದಾದ ಈ ಭಾಷೆ ಬಗ್ಗೆ ಹೆಮ್ಮೆ ಪಡಬೇಕೇ ಹೊರತು, ಕೀಳರಿಮೆ ಸಲ್ಲದು. ತುಳು ಸಾಹಿತ್ಯದ ಏಳಿಗೆಗಾಗಿ ದುಡಿದ ಅಮೃತ ಸೋಮೇಶ್ವರ ಅವರ ಹೆಸರನ್ನು ಈ ಸಭಾಂಗಣಕ್ಕೆ ಇಟ್ಟಿರುವ ಅಕಾಡೆಮಿಯು ಅವರ ಹೆಸರನ್ನು ಜನ ಸ್ಮರಿಸುವಂತೆ ಮಾಡಿದೆ’ ಎಂದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ವ್ಯಾನಿ ಅಲ್ವಾರಿಸ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ, ತುಳು ಸಾಹಿತಿ ಇಂದಿರಾ ಹೆಗ್ಗಡೆ, ಪ್ರಮುಖರಾದ ಎಚ್.ಎಂ. ವಾಟ್ಸನ್, ಎಂ.ದೇವದಾಸ್, ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಭಾಗವಹಿದ್ದರು.
ದುರ್ಗಾ ಪ್ರಸಾದ್ ಕುಂಬ್ರ ನಿರೂಪಿಸಿದರು. ಉದ್ಯಾವರ ನಾಗೇಶ ಕುಮಾರ್ ಸ್ವಾಗತಿಸಿದರು.

 

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!