ದಕ್ಷಿಣ ಕನ್ನಡ: ತುಳುಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಭಾಂಗಣದಲ್ಲಿ, ಅಕಾಡೆಮಿಯ 30ನೇ ವರ್ಷದ ಸಂಭ್ರಮಾಚರಣೆ ಮತ್ತು ಸಭಾಂಗಣ ಉದ್ಘಾಟನೆ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆ, ಸಂಸ್ಕೃತಿ ಅಧ್ಯಯನ, ದಾಖಲೀಕರಣ ಮಾಡುವ ಯೋಜನೆ ಹೊಂದಿದೆ.
ತುಳುಭವನವನ್ನು ತುಳುನಾಡಿನ ಸಾಂಸ್ಕೃತಿಕ ಕೇಂದ್ರವನ್ನಾಗಿ ರೂಪಿಸಲಿದ್ದೇವೆ. ಮ್ಯೂಸಿಯಂ ಆರಂಭಿಸಲಿದ್ದೇವೆ’ ಎಂದರು ಸಭಾಂಗಣವನ್ನು ಉದ್ಘಾಟಿಸಿದ ಮಾಜಿ ಸಚಿವ ಬಿ.ರಮಾನಾಥ ರೈ, ‘ಸಮಾಜದಲ್ಲಿ ಸಾಮರಸ್ಯ ತರುವ ಶಕ್ತಿ ತುಳು ಭಾಷೆಗಿದೆ. ಪಂಚದ್ರಾವಿಡ ಭಾಷೆಗಳಲ್ಲೊಂದಾದ ಈ ಭಾಷೆ ಬಗ್ಗೆ ಹೆಮ್ಮೆ ಪಡಬೇಕೇ ಹೊರತು, ಕೀಳರಿಮೆ ಸಲ್ಲದು. ತುಳು ಸಾಹಿತ್ಯದ ಏಳಿಗೆಗಾಗಿ ದುಡಿದ ಅಮೃತ ಸೋಮೇಶ್ವರ ಅವರ ಹೆಸರನ್ನು ಈ ಸಭಾಂಗಣಕ್ಕೆ ಇಟ್ಟಿರುವ ಅಕಾಡೆಮಿಯು ಅವರ ಹೆಸರನ್ನು ಜನ ಸ್ಮರಿಸುವಂತೆ ಮಾಡಿದೆ’ ಎಂದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ವ್ಯಾನಿ ಅಲ್ವಾರಿಸ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ, ತುಳು ಸಾಹಿತಿ ಇಂದಿರಾ ಹೆಗ್ಗಡೆ, ಪ್ರಮುಖರಾದ ಎಚ್.ಎಂ. ವಾಟ್ಸನ್, ಎಂ.ದೇವದಾಸ್, ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಭಾಗವಹಿದ್ದರು.
ದುರ್ಗಾ ಪ್ರಸಾದ್ ಕುಂಬ್ರ ನಿರೂಪಿಸಿದರು. ಉದ್ಯಾವರ ನಾಗೇಶ ಕುಮಾರ್ ಸ್ವಾಗತಿಸಿದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…