ಜನ ಮನದ ನಾಡಿ ಮಿಡಿತ

Advertisement

ಕೊನೆರಬೆಟ್ಟು : ಭಾರೀ ಗಾಳಿಗೆ ವಿದ್ಯುತ್‌ಕಂಬ ಗದ್ದೆಗೆ; ದೈವಗಳ ಕಾರಣಿಕದಿಂದ ತಪ್ಪಿದ ಅಪಾಯ

ದೈವಗಳ ಕಾರಣಿಕದಿಂದ ಸಂಭವಿಸಬಹುದಾದ ಬಹು ದೊಡ್ಡ ಅಪಾಯ ತಪ್ಪಿ ಹೋದ ಘಟನೆ ಸಿದ್ದಕಟ್ಟೆ ಸಮೀಪದ ಕೊನೆರಬೆಟ್ಟುನಲ್ಲಿ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಿದ್ದಕಟ್ಟೆ ಬಂಟರ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾ ಕೂಟ ಆಯೋಜಿಸುತ್ತಿದ್ದು , ಪ್ರತೀ ವರ್ಷ ದಂತೆ ಕೆಸರು ಗದ್ದೆ ಕೂಟದ ಮೊದಲು ಕೊನೆರಬೆಟ್ಟು ಸ್ಥಳ ದೈವಗಳಿಗೆ ಪರ್ವ ನಡೆಸಿ ಪ್ರಾರ್ಥನೆ ಮಾಡುವುದು ವಾಡಿಕೆ. ಈ ಬಾರಿಯೂ ರವಿವಾರ ಕೆಸರು ಗದ್ದೆ ಕೂಟದ ಮೊದಲು ಪ್ರಾರ್ಥನೆ ಸಲ್ಲಿಸಲಾಗಿತ್ತು.ಕ್ರೀಡಾಕೂಟ ನಡೆಯುವ ಗದ್ದೆಯ ಮೇಲ್ಭಾಗದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ಹಾದು ಹೋಗಿತ್ತು.ಇದನ್ನು ಕಂಡ ಆಯೋಜಕರು ಕ್ರೀಡಾಕೂಟದಲ್ಲಿ ವಾಲಿಬಾಲ್ ಮೊದಲಾದ ಪಂದ್ಯಾಟಗಳಿರುವ ಕಾರಣ ಕ್ರೀಡಾ ಕೂಟ ನಡೆಸುವ ದಿನ ಈ ಲೈನ್ ಸ್ಥಗಿತಗೊಳಿಸುವಂತೆ ಮೆಸ್ಕಾಂ ಇಲಾಖೆಗೆ ಮನವಿ ಮಾಡಿ ಲೈನ್ ಕಟ್ ಮಾಡಿಸಿದ್ದರು.ವಿಚಿತ್ರವೆಂದರೆ ರವಿವಾರ ಕ್ರೀಡಾ ಕೂಟ ನಡೆಯುವಾಗ ಭಾರೀ ಗಾಳಿ ಬೀಸಿ ವಿದ್ಯುತ್ ಕಂಬ ತುಂಡಾಗಿ ತಂತಿ ಸಹಿತ ಗದ್ದೆಗೆ ಬಿದ್ದಿದೆ. ಗದ್ದೆಯಲ್ಲಿ ಮಕ್ಕಳ ಸಹಿತ ಸುಮಾರು ಐನೂರರಷ್ಟು ಜನ ಸೇರಿದ್ದರು.

 

ಆದರೆ ಮೊದಲೇ ಲೈನ್ ಕಟ್ ಮಾಡಿದ್ದುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಆಯೋಜಕರಿಗೆ ಜಾಗದ ದೈವ ಗಳು ಮೊದಲೇ ಸೂಚನೆ ನೀಡಿದ್ದಿರಬಹುದು. ತುಳುನಾಡಿನ ದೈವದ ಕಾರಣಿಕ ಇರುವುದಕ್ಕೆ ಇದು ಸ್ಪಷ್ಟ ನಿದರ್ಶನವೆಂದು ಆಯೋಜಕರು ತಿಳಿಸಿದ್ದಾರೆ. ಈ ಘಟನೆ ಇದೀಗ ಸಾಕಷ್ಟು ವೈರಲ್ ಆಗಿದೆ

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!