ದೈವಗಳ ಕಾರಣಿಕದಿಂದ ಸಂಭವಿಸಬಹುದಾದ ಬಹು ದೊಡ್ಡ ಅಪಾಯ ತಪ್ಪಿ ಹೋದ ಘಟನೆ ಸಿದ್ದಕಟ್ಟೆ ಸಮೀಪದ ಕೊನೆರಬೆಟ್ಟುನಲ್ಲಿ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಿದ್ದಕಟ್ಟೆ ಬಂಟರ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾ ಕೂಟ ಆಯೋಜಿಸುತ್ತಿದ್ದು , ಪ್ರತೀ ವರ್ಷ ದಂತೆ ಕೆಸರು ಗದ್ದೆ ಕೂಟದ ಮೊದಲು ಕೊನೆರಬೆಟ್ಟು ಸ್ಥಳ ದೈವಗಳಿಗೆ ಪರ್ವ ನಡೆಸಿ ಪ್ರಾರ್ಥನೆ ಮಾಡುವುದು ವಾಡಿಕೆ. ಈ ಬಾರಿಯೂ ರವಿವಾರ ಕೆಸರು ಗದ್ದೆ ಕೂಟದ ಮೊದಲು ಪ್ರಾರ್ಥನೆ ಸಲ್ಲಿಸಲಾಗಿತ್ತು.ಕ್ರೀಡಾಕೂಟ ನಡೆಯುವ ಗದ್ದೆಯ ಮೇಲ್ಭಾಗದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ಹಾದು ಹೋಗಿತ್ತು.ಇದನ್ನು ಕಂಡ ಆಯೋಜಕರು ಕ್ರೀಡಾಕೂಟದಲ್ಲಿ ವಾಲಿಬಾಲ್ ಮೊದಲಾದ ಪಂದ್ಯಾಟಗಳಿರುವ ಕಾರಣ ಕ್ರೀಡಾ ಕೂಟ ನಡೆಸುವ ದಿನ ಈ ಲೈನ್ ಸ್ಥಗಿತಗೊಳಿಸುವಂತೆ ಮೆಸ್ಕಾಂ ಇಲಾಖೆಗೆ ಮನವಿ ಮಾಡಿ ಲೈನ್ ಕಟ್ ಮಾಡಿಸಿದ್ದರು.ವಿಚಿತ್ರವೆಂದರೆ ರವಿವಾರ ಕ್ರೀಡಾ ಕೂಟ ನಡೆಯುವಾಗ ಭಾರೀ ಗಾಳಿ ಬೀಸಿ ವಿದ್ಯುತ್ ಕಂಬ ತುಂಡಾಗಿ ತಂತಿ ಸಹಿತ ಗದ್ದೆಗೆ ಬಿದ್ದಿದೆ. ಗದ್ದೆಯಲ್ಲಿ ಮಕ್ಕಳ ಸಹಿತ ಸುಮಾರು ಐನೂರರಷ್ಟು ಜನ ಸೇರಿದ್ದರು.
ಆದರೆ ಮೊದಲೇ ಲೈನ್ ಕಟ್ ಮಾಡಿದ್ದುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಆಯೋಜಕರಿಗೆ ಜಾಗದ ದೈವ ಗಳು ಮೊದಲೇ ಸೂಚನೆ ನೀಡಿದ್ದಿರಬಹುದು. ತುಳುನಾಡಿನ ದೈವದ ಕಾರಣಿಕ ಇರುವುದಕ್ಕೆ ಇದು ಸ್ಪಷ್ಟ ನಿದರ್ಶನವೆಂದು ಆಯೋಜಕರು ತಿಳಿಸಿದ್ದಾರೆ. ಈ ಘಟನೆ ಇದೀಗ ಸಾಕಷ್ಟು ವೈರಲ್ ಆಗಿದೆ
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…