ಜನ ಮನದ ನಾಡಿ ಮಿಡಿತ

Advertisement

ಮಾಣಿಲ ಸರಕಾರಿ ಪ್ರೌಢಶಾಲೆಗೆ ಹಸಿರು ನೈರ್ಮಲ್ಯ ಪ್ರಶಸ್ತಿ ಪ್ರಧಾನ

ದಕ್ಷಿಣ ಕನ್ನಡ : ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಕೊಡ ಮಾಡುವ ಹಸಿರು ನೈರ್ಮಲ್ಯ ಪ್ರಶಸ್ತಿಯು ಸರ್ಕಾರಿ ಪ್ರೌಢಶಾಲೆ ಮಾಣಿಲ ಇಲ್ಲಿಗೆ ದೊರಕಿದೆ
ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ನ ಸ್ಥಾಪಕ ಸದ್ಗುರು ಮಧುಸೂದನ್ ಸಾಯಿ ಅವರ ಜನ್ಮ ದಿನೋತ್ಸವ ಪ್ರಯುಕ್ತ ಕೊಡಮಾಡುವ ನೈರ್ಮಲ್ಯ ಶಾಲಾ ಅಭಿವೃದ್ಧಿಯ ಪ್ರಶಸ್ತಿ ಇದಾಗಿದ್ದು, ಸರ್ಕಾರಿ ಪ್ರೌಢಶಾಲೆ ಮಾಣಿಲ ಅಂತಿಮ ಸುತ್ತಿನಲ್ಲಿ ಆಯ್ಕೆಯಾಗಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ವಿಟ್ಲ ಸಮೀಪದ ಮಾಣಿಲ ಸರಕಾರಿ ಪ್ರೌಢಶಾಲೆಯು ಕಳೆದ ಹಲವಾರು ವರ್ಷಗಳಿಂದ 10ನೇ ತರಗತಿಯಲ್ಲಿ ಅತ್ಯುತ್ತಮ ಫಲಿತಾಂಶ ನೀಡುತ್ತಾ ಬಂದಿದ್ದು, ಕಲಿಕೆಗೆ ಪೂರಕವಾದ ವಾತಾವರಣ,ವಿಶಾಲವಾದ ಆಟದ ಮೈದಾನ, ಶಾಲಾ ಸುತ್ತು ಮುತ್ತಲಿನ ಸ್ವಚ್ಛ ವಾತಾವರಣ, ಹಚ್ಚ ಹಸಿರಿನಿಂದ ಕೂಡಿದ ಸುತ್ತಮುತ್ತಲ ಪ್ರದೇಶ, ಶಿಕ್ಷಕರ ಉತ್ಸಾಹದ ಕಾರ್ಯವೈಕರಿ, ಉತ್ತಮ ಶಿಕ್ಷಣ ಮಟ್ಟ, ಹಾಗೂ ಇತರ ಮೂಲಭೂತ ಸೌಕರ್ಯಗಳನ್ನು ಗಮನಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ
ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ನ ಸ್ಥಾಪಕ ಸದ್ಗುರು ಶ್ರೀ ಮಧುಸೂಧನಸಾಯಿ ಜನ್ಮದಿನೋತ್ಸವ ಪ್ರಯುಕ್ತ ಕೊಡ ಮಾಡಿದ ಈ ಪ್ರಶಸ್ತಿಯು 10000 ನಗದು ಸಹಿತ ನೀಡಲಾಗುತ್ತಿದೆ.
ಪ್ರಶಸ್ತಿ ಕುರಿತು ಶಾಲಾ ಶಿಕ್ಷಕ ವರ್ಗ ಹಾಗೂ ಮಕ್ಕಳು, ಮತ್ತು ಸದೃದಯಿ ಊರವರು ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!