ಜನ ಮನದ ನಾಡಿ ಮಿಡಿತ

Advertisement

ಮಾಣಿಲ ಸರಕಾರಿ ಪ್ರೌಢಶಾಲೆಗೆ ಹಸಿರು ನೈರ್ಮಲ್ಯ ಪ್ರಶಸ್ತಿ ಪ್ರಧಾನ

ದಕ್ಷಿಣ ಕನ್ನಡ : ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಕೊಡ ಮಾಡುವ ಹಸಿರು ನೈರ್ಮಲ್ಯ ಪ್ರಶಸ್ತಿಯು ಸರ್ಕಾರಿ ಪ್ರೌಢಶಾಲೆ ಮಾಣಿಲ ಇಲ್ಲಿಗೆ ದೊರಕಿದೆ
ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ನ ಸ್ಥಾಪಕ ಸದ್ಗುರು ಮಧುಸೂದನ್ ಸಾಯಿ ಅವರ ಜನ್ಮ ದಿನೋತ್ಸವ ಪ್ರಯುಕ್ತ ಕೊಡಮಾಡುವ ನೈರ್ಮಲ್ಯ ಶಾಲಾ ಅಭಿವೃದ್ಧಿಯ ಪ್ರಶಸ್ತಿ ಇದಾಗಿದ್ದು, ಸರ್ಕಾರಿ ಪ್ರೌಢಶಾಲೆ ಮಾಣಿಲ ಅಂತಿಮ ಸುತ್ತಿನಲ್ಲಿ ಆಯ್ಕೆಯಾಗಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ವಿಟ್ಲ ಸಮೀಪದ ಮಾಣಿಲ ಸರಕಾರಿ ಪ್ರೌಢಶಾಲೆಯು ಕಳೆದ ಹಲವಾರು ವರ್ಷಗಳಿಂದ 10ನೇ ತರಗತಿಯಲ್ಲಿ ಅತ್ಯುತ್ತಮ ಫಲಿತಾಂಶ ನೀಡುತ್ತಾ ಬಂದಿದ್ದು, ಕಲಿಕೆಗೆ ಪೂರಕವಾದ ವಾತಾವರಣ,ವಿಶಾಲವಾದ ಆಟದ ಮೈದಾನ, ಶಾಲಾ ಸುತ್ತು ಮುತ್ತಲಿನ ಸ್ವಚ್ಛ ವಾತಾವರಣ, ಹಚ್ಚ ಹಸಿರಿನಿಂದ ಕೂಡಿದ ಸುತ್ತಮುತ್ತಲ ಪ್ರದೇಶ, ಶಿಕ್ಷಕರ ಉತ್ಸಾಹದ ಕಾರ್ಯವೈಕರಿ, ಉತ್ತಮ ಶಿಕ್ಷಣ ಮಟ್ಟ, ಹಾಗೂ ಇತರ ಮೂಲಭೂತ ಸೌಕರ್ಯಗಳನ್ನು ಗಮನಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ
ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ನ ಸ್ಥಾಪಕ ಸದ್ಗುರು ಶ್ರೀ ಮಧುಸೂಧನಸಾಯಿ ಜನ್ಮದಿನೋತ್ಸವ ಪ್ರಯುಕ್ತ ಕೊಡ ಮಾಡಿದ ಈ ಪ್ರಶಸ್ತಿಯು 10000 ನಗದು ಸಹಿತ ನೀಡಲಾಗುತ್ತಿದೆ.
ಪ್ರಶಸ್ತಿ ಕುರಿತು ಶಾಲಾ ಶಿಕ್ಷಕ ವರ್ಗ ಹಾಗೂ ಮಕ್ಕಳು, ಮತ್ತು ಸದೃದಯಿ ಊರವರು ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!