ದಕ್ಷಿಣ ಕನ್ನಡ : ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಕೊಡ ಮಾಡುವ ಹಸಿರು ನೈರ್ಮಲ್ಯ ಪ್ರಶಸ್ತಿಯು ಸರ್ಕಾರಿ ಪ್ರೌಢಶಾಲೆ ಮಾಣಿಲ ಇಲ್ಲಿಗೆ ದೊರಕಿದೆ
ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ನ ಸ್ಥಾಪಕ ಸದ್ಗುರು ಮಧುಸೂದನ್ ಸಾಯಿ ಅವರ ಜನ್ಮ ದಿನೋತ್ಸವ ಪ್ರಯುಕ್ತ ಕೊಡಮಾಡುವ ನೈರ್ಮಲ್ಯ ಶಾಲಾ ಅಭಿವೃದ್ಧಿಯ ಪ್ರಶಸ್ತಿ ಇದಾಗಿದ್ದು, ಸರ್ಕಾರಿ ಪ್ರೌಢಶಾಲೆ ಮಾಣಿಲ ಅಂತಿಮ ಸುತ್ತಿನಲ್ಲಿ ಆಯ್ಕೆಯಾಗಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ವಿಟ್ಲ ಸಮೀಪದ ಮಾಣಿಲ ಸರಕಾರಿ ಪ್ರೌಢಶಾಲೆಯು ಕಳೆದ ಹಲವಾರು ವರ್ಷಗಳಿಂದ 10ನೇ ತರಗತಿಯಲ್ಲಿ ಅತ್ಯುತ್ತಮ ಫಲಿತಾಂಶ ನೀಡುತ್ತಾ ಬಂದಿದ್ದು, ಕಲಿಕೆಗೆ ಪೂರಕವಾದ ವಾತಾವರಣ,ವಿಶಾಲವಾದ ಆಟದ ಮೈದಾನ, ಶಾಲಾ ಸುತ್ತು ಮುತ್ತಲಿನ ಸ್ವಚ್ಛ ವಾತಾವರಣ, ಹಚ್ಚ ಹಸಿರಿನಿಂದ ಕೂಡಿದ ಸುತ್ತಮುತ್ತಲ ಪ್ರದೇಶ, ಶಿಕ್ಷಕರ ಉತ್ಸಾಹದ ಕಾರ್ಯವೈಕರಿ, ಉತ್ತಮ ಶಿಕ್ಷಣ ಮಟ್ಟ, ಹಾಗೂ ಇತರ ಮೂಲಭೂತ ಸೌಕರ್ಯಗಳನ್ನು ಗಮನಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ
ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ನ ಸ್ಥಾಪಕ ಸದ್ಗುರು ಶ್ರೀ ಮಧುಸೂಧನಸಾಯಿ ಜನ್ಮದಿನೋತ್ಸವ ಪ್ರಯುಕ್ತ ಕೊಡ ಮಾಡಿದ ಈ ಪ್ರಶಸ್ತಿಯು 10000 ನಗದು ಸಹಿತ ನೀಡಲಾಗುತ್ತಿದೆ.
ಪ್ರಶಸ್ತಿ ಕುರಿತು ಶಾಲಾ ಶಿಕ್ಷಕ ವರ್ಗ ಹಾಗೂ ಮಕ್ಕಳು, ಮತ್ತು ಸದೃದಯಿ ಊರವರು ಸಂತಸ ವ್ಯಕ್ತಪಡಿಸಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…