ಶಿರೂರು ಗುಡ್ಡ ಕುಸಿತ ಪ್ರಕರಣ
ಶಿರೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಯಿತು.
ದುರಂತದಲ್ಲಿ ಉಳವರೆ ಗ್ರಾಮದ 6 ಮನೆಗಳು ಸಂಪೂರ್ಣ ನಾಮಾವಶೇಷವಾಗಿದೆ. 18ರಷ್ಟು ಮನೆಗಳು ಭಾಗಶ: ಹಾನಿಗೊಳಗಾಗಿದೆ.
ಬೇಸರದ ಸಂಗತಿ ಎಂದರೆ ಮೃತದೇಹವನ್ನು ಕುಟುಂಬಿಕರಿಗೆ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಕಂದಾಯ ಇಲಾಖೆ, ಸ್ಥಳೀಯ ಆಡಳಿತ, ಶಾಸಕರು ಹೀಗೆ ಯಾರೆಂದರೆ ಯಾರೂ ಇರಲಿಲ್ಲ. ಗ್ರಾಮದ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಮಹಿಳೆಯರು ಗಂಜಿ ಕೇಂದ್ರದಲ್ಲಿದ್ದಾರೆ.
ಹೊರುವವರಿಲ್ಲದೆ ರಸ್ತೆಯೂ ಸರಿಯಿಲ್ಲದೇ ವೃದ್ಧೆಯ ಶವ ಆಂಬುಲೆನ್ಸ್ ನಲ್ಲಿ ಉಳಿದಿದ್ದು ಕೊಳೆತ ವಾಸನೆಯಿಂದಾಗಿ ಯಾರೂ ಹೊರಲು ಸಿದ್ಧರಿರಲಿಲ್ಲ. ಈ ವೇಳೆ ಸ್ಥಳದಲ್ಲಿದ್ದ ಮಂಗಳೂರಿನ ಪತ್ರಕರ್ತರು ಮೃತದೇಹವನ್ನು ತಾವೇ ಹೊತ್ತುಕೊಂಡು ಸಾಗಿ ಮನೆಯವರಿಗೆ ಒಪ್ಪಿಸಿ ಮುಂದಿನ ಅಂತಿಮ ಸಂಸ್ಕಾರ ನಡೆಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ. ನಿರಾಶ್ರಿತರು ಮತ್ತು ಘಟನೆಯಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ನೀಡಲು ಮಂಗಳೂರಿನಿಂದ ತೆರಳಿದ್ದ ಪತ್ರಕರ್ತರ ಚಾರಣ ತಂಡದ ಸದಸ್ಯರಾದ ಮೋಹನ್ ಕುತ್ತಾರ್, ಶಶಿ ಬೆಳ್ಳಾಯರು, ಆರಿಫ್ ಯುಆರ್ ಕಲ್ಕಟ್ಟ, ಗಿರೀಶ್ ಮಳಲಿ, ಶಿವಶಂಕರ್ ಅವರು ಶವಸಂಸ್ಕಾರದಲ್ಲಿ ಸಹಕರಿಸಿದರು.
ಟ್ಯಾಂಕರ್ ಸ್ಫೋಟವೇ ಘಟನೆಗೆ ಕಾರಣ!
ಶಿರೂರು ಗುಡ್ಡ ಕುಸಿತ ಉಂಟಾದಾಗ ಹೆದ್ದಾರಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನೀರಿಗೆ ಬಿದ್ದು ಭಾರೀ ಸದ್ದಿನೊಂದಿಗೆ ಸ್ಫೋಟ ಸಂಭವಿಸಿತ್ತು. ಇದರಿಂದಲೇ ಉಳವರೆ ಗ್ರಾಮ ನಾಶಗೊಂಡು ಹಲವರು ಪ್ರಾಣ ಕಳೆದುಕೊಳ್ಳುವಂತಾಯ್ತು ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ. ನೀರು ಚಿಮ್ಮುತ್ತಿದ್ದಂತೆ ಬಾಂಬ್ನಂತೆ ಸ್ಫೋಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಮಾಹಿತಿ ನೀಡಿರುವುದರಿಂದ ಈ ಸಂಶಯ ಬಲವಾಗಿದೆ. ಈ ನಡುವೆ ಕೇರಳ ಟ್ಯಾಂಕರ್ ಡ್ರೈವರ್ ಅರ್ಜುನನಿಗಾಗಿ ಶೋಧ ಮುಂದುವರಿದಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…