ಮಂಗಳೂರು, ಜು.10: ನಗರದ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲು ಕ್ರಾಸ್ ಬಳಿ ನಡೆದ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.
ಅಂಗಡಿ ಮಾಲೀಕ ತೌಸಿಫ್ ಹುಸೇನ್ ಎಂಬಾತ ನೌಕರ ಗಜ್ವಾನ್ ಅಲಿಯಾಸ್ ಜಗ್ಗು ಎಂಬಾತನ ತಲೆಗೆ ಮರದ ದಿಮ್ಮಿಯಿಂದ ಹೊಡೆದು ಬಳಿಕ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು ಬೆಳಕಿಗೆ ಬಂದಿದೆ.
ಗಜ್ವಾನ್ ಕಳೆದ ಮೂರು ವರ್ಷಗಳಿಂದ ತೌಸಿಫ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಅಂಗಡಿಯ ಪಕ್ಕದ ಶೆಡ್ನಲ್ಲಿ ಮಲಗುತಿದ್ದ. ತೌಸಿಫ್ ಆಗಾಗ ಗಜ್ವಾನ್ ಗೆ ಹೊಡೆಯುತ್ತಿದ್ದ. ಶನಿವಾರವೂ ಗಜ್ವಾನ್ ಮೇಲೆ ಮರದ ದಿಮ್ಮಿಗಳಿಂದ ಹಲ್ಲೆ ನಡೆಸಿದ್ದಾನೆ. ಗಜ್ವಾನ್ ಪ್ರಜ್ಞೆ ತಪ್ಪಿದ ಕಾರಣ ಆರೋಪಿ ತೌಸಿಫ್ ಆತನ ದೇಹವನ್ನು ಸಮೀಪದ ಶೆಡ್ಗೆ ಸ್ಥಳಾಂತರಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ನಂತರ ಆರೋಪಿ ತೌಸಿಫ್ ಗಜ್ವಾನ್ನನ್ನು ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದು, ವಿದ್ಯುತ್ ಶಾಕ್ನಿಂದ ಗಜ್ವಾನ್ ಸುಟ್ಟು ಹೋಗಿದ್ದಾನೆ ಎಂದು ಹೇಳಿದ್ದಾನೆ. ಆಸ್ಪತ್ರೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರಣೆ ವೇಳೆ ತೌಸಿಫ್ ತಪ್ಪೊಪ್ಪಿಕೊಂಡಿದ್ದಾನೆ. ಗಜ್ವಾನ್ ಅವರ ಮೃತದೇಹದ ಬಹುಪಾಲು ಭಾಗವು ತೀವ್ರವಾಗಿ ಸುಟ್ಟುಹೋಗಿದೆ. ಮರಣೋತ್ತರ ಪರೀಕ್ಷೆಯ ವರದಿ ಮಾತ್ರ ಸಾವಿನ ಕಾರಣದ ಬಗ್ಗೆ ಹೆಚ್ಚು ಬೆಳಕು ಚೆಲ್ಲುತ್ತದೆ. ಭಾನುವಾರವೂ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.
ಮಾಧ್ಯಮ ಲೋಕದಲ್ಲಿ ಅಚ್ಚಳಿಯದ ಸಾಧನೆಯನ್ನು ಮಾಡಿ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಾಧ್ಯಮ ಆಡಳಿತ…
ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ. ಆರ್ಥಿಕ…
ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಕೂಟರ್ ಸವಾರನೋರ್ವನನ್ನು ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿ ನಿವಾಸಿ…
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…