ಮಂಗಳೂರು, ಜು.10: ನಗರದ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲು ಕ್ರಾಸ್ ಬಳಿ ನಡೆದ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.
ಅಂಗಡಿ ಮಾಲೀಕ ತೌಸಿಫ್ ಹುಸೇನ್ ಎಂಬಾತ ನೌಕರ ಗಜ್ವಾನ್ ಅಲಿಯಾಸ್ ಜಗ್ಗು ಎಂಬಾತನ ತಲೆಗೆ ಮರದ ದಿಮ್ಮಿಯಿಂದ ಹೊಡೆದು ಬಳಿಕ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು ಬೆಳಕಿಗೆ ಬಂದಿದೆ.
ಗಜ್ವಾನ್ ಕಳೆದ ಮೂರು ವರ್ಷಗಳಿಂದ ತೌಸಿಫ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಅಂಗಡಿಯ ಪಕ್ಕದ ಶೆಡ್ನಲ್ಲಿ ಮಲಗುತಿದ್ದ. ತೌಸಿಫ್ ಆಗಾಗ ಗಜ್ವಾನ್ ಗೆ ಹೊಡೆಯುತ್ತಿದ್ದ. ಶನಿವಾರವೂ ಗಜ್ವಾನ್ ಮೇಲೆ ಮರದ ದಿಮ್ಮಿಗಳಿಂದ ಹಲ್ಲೆ ನಡೆಸಿದ್ದಾನೆ. ಗಜ್ವಾನ್ ಪ್ರಜ್ಞೆ ತಪ್ಪಿದ ಕಾರಣ ಆರೋಪಿ ತೌಸಿಫ್ ಆತನ ದೇಹವನ್ನು ಸಮೀಪದ ಶೆಡ್ಗೆ ಸ್ಥಳಾಂತರಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ನಂತರ ಆರೋಪಿ ತೌಸಿಫ್ ಗಜ್ವಾನ್ನನ್ನು ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದು, ವಿದ್ಯುತ್ ಶಾಕ್ನಿಂದ ಗಜ್ವಾನ್ ಸುಟ್ಟು ಹೋಗಿದ್ದಾನೆ ಎಂದು ಹೇಳಿದ್ದಾನೆ. ಆಸ್ಪತ್ರೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರಣೆ ವೇಳೆ ತೌಸಿಫ್ ತಪ್ಪೊಪ್ಪಿಕೊಂಡಿದ್ದಾನೆ. ಗಜ್ವಾನ್ ಅವರ ಮೃತದೇಹದ ಬಹುಪಾಲು ಭಾಗವು ತೀವ್ರವಾಗಿ ಸುಟ್ಟುಹೋಗಿದೆ. ಮರಣೋತ್ತರ ಪರೀಕ್ಷೆಯ ವರದಿ ಮಾತ್ರ ಸಾವಿನ ಕಾರಣದ ಬಗ್ಗೆ ಹೆಚ್ಚು ಬೆಳಕು ಚೆಲ್ಲುತ್ತದೆ. ಭಾನುವಾರವೂ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…