ಮಂಗಳೂರು, ಜು.10: ನಗರದ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲು ಕ್ರಾಸ್ ಬಳಿ ನಡೆದ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.
ಅಂಗಡಿ ಮಾಲೀಕ ತೌಸಿಫ್ ಹುಸೇನ್ ಎಂಬಾತ ನೌಕರ ಗಜ್ವಾನ್ ಅಲಿಯಾಸ್ ಜಗ್ಗು ಎಂಬಾತನ ತಲೆಗೆ ಮರದ ದಿಮ್ಮಿಯಿಂದ ಹೊಡೆದು ಬಳಿಕ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು ಬೆಳಕಿಗೆ ಬಂದಿದೆ.
ಗಜ್ವಾನ್ ಕಳೆದ ಮೂರು ವರ್ಷಗಳಿಂದ ತೌಸಿಫ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಅಂಗಡಿಯ ಪಕ್ಕದ ಶೆಡ್ನಲ್ಲಿ ಮಲಗುತಿದ್ದ. ತೌಸಿಫ್ ಆಗಾಗ ಗಜ್ವಾನ್ ಗೆ ಹೊಡೆಯುತ್ತಿದ್ದ. ಶನಿವಾರವೂ ಗಜ್ವಾನ್ ಮೇಲೆ ಮರದ ದಿಮ್ಮಿಗಳಿಂದ ಹಲ್ಲೆ ನಡೆಸಿದ್ದಾನೆ. ಗಜ್ವಾನ್ ಪ್ರಜ್ಞೆ ತಪ್ಪಿದ ಕಾರಣ ಆರೋಪಿ ತೌಸಿಫ್ ಆತನ ದೇಹವನ್ನು ಸಮೀಪದ ಶೆಡ್ಗೆ ಸ್ಥಳಾಂತರಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ನಂತರ ಆರೋಪಿ ತೌಸಿಫ್ ಗಜ್ವಾನ್ನನ್ನು ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದು, ವಿದ್ಯುತ್ ಶಾಕ್ನಿಂದ ಗಜ್ವಾನ್ ಸುಟ್ಟು ಹೋಗಿದ್ದಾನೆ ಎಂದು ಹೇಳಿದ್ದಾನೆ. ಆಸ್ಪತ್ರೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರಣೆ ವೇಳೆ ತೌಸಿಫ್ ತಪ್ಪೊಪ್ಪಿಕೊಂಡಿದ್ದಾನೆ. ಗಜ್ವಾನ್ ಅವರ ಮೃತದೇಹದ ಬಹುಪಾಲು ಭಾಗವು ತೀವ್ರವಾಗಿ ಸುಟ್ಟುಹೋಗಿದೆ. ಮರಣೋತ್ತರ ಪರೀಕ್ಷೆಯ ವರದಿ ಮಾತ್ರ ಸಾವಿನ ಕಾರಣದ ಬಗ್ಗೆ ಹೆಚ್ಚು ಬೆಳಕು ಚೆಲ್ಲುತ್ತದೆ. ಭಾನುವಾರವೂ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…