ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಜೋಕಟ್ಟೆಯಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಮೃತ್ಯು..!

ಮಂಗಳೂರು: ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ತಡೆಗೋಡೆಗಳು ಕುಸಿದು ಬಿದ್ದು ಜೀವಹಾನಿಗಳು ಸಂಭವಿಸುತ್ತಿದೆ ಆದರೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಂಪೂರ್ಣ ವಿಫಲವಾಗಿದೆ.

ಅದರ ಮುಂದುವರಿದ ಭಾಗವಾಗಿ ನಿನ್ನೆ ತಡರಾತ್ರಿ ಜೋಕಟ್ಟೆಯಲ್ಲಿ ಮನೆಯ ಮೇಲೆ ತಡೆಗೋಡೆ ಬಿದ್ದು ಅಪ್ರಾಪ್ತ ದಲಿತ ಬಾಲಕನೋರ್ವ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಉಳ್ಳಾಲ ತಾಲೂಕಿನ ಕುತ್ತಾರು ಸಮೀಪ ತಡೆಗೋಡೆ ಬಿದ್ದು ಒಂದೇ ಕುಟುಂಬದ ನಾಲ್ಕು ಸದಸ್ಯರು ಮೃತಪಟ್ಟ ಬಳಿಕವೂ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ವಿಫಲವಾಗಿದೆ.ಅದರ ನಂತರ ಅನೇಕ ಕಡೆ ತಡೆಗೋಡೆ ಕುಸಿದಿದೆ,ನಿನ್ನೆ ತಡರಾತ್ರಿ ಜೋಕಟ್ಟೆಯಲ್ಲಿ ತಡೆಗೋಡೆ ಕುಸಿದು ಒಬ್ಬನ ಜೀವಹಾನಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಮಳೆ ಬರುವ ಮುನ್ಸೂಚನೆ ಇರುವಾಗ ಕೇವಲ ಶಾಲೆಗೆ ರಜೆ ಕೊಟ್ಟ ಮಾತ್ರಕ್ಕೆ ಜಿಲ್ಲಾಡಳಿತದ ಕೆಲಸ ಮುಗಿಯುವುದಿಲ್ಲ,ಇಂತಹ ಅಪಾಯಕಾರಿ ತಡೆಗೋಡೆ,ಬರೆ ಜರಿತ ಸಾಧ್ಯ ಇರುವ ಬೆಟ್ಟ ಗುಡ್ಡ ಪ್ರದೇಶಗಳನ್ನು ಗುರುತಿಸಿ ಅಲ್ಲಿಂದ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡುವಂತಹ ಹಾಗೂ ಅವರಿಗೆ ಸೂಕ್ತ ವ್ಯವಸ್ಥೆಗಳನ್ನು ಮಾಡುವ ಕೆಲಸ ಮಾಡಬೇಕು. ಅದೇ ರೀತಿ ಇಂತಹ ಅಪಾಯಕಾರಿ ಪ್ರದೇಶ ಎಲ್ಲೆಲ್ಲಾ ಇವೆ ಎಂದು ಜಿಲ್ಲೆಯ ಎಲ್ಲಾ ಸ್ಥಳೀಯಾಡಳಿತ ಗಳಿಗೆ ಅಥವಾ ಇದಕ್ಕೆಂದೇ ಜಿಲ್ಲಾಡಳಿತದಿಂದ ನೇಮಿಸಲ್ಪಟ್ಟ ವಿಶೇಷ ತಂಡಗಳಿಗೆ ನಿರ್ದೇಶನ ನೀಡಿ ಪತ್ತೆ ಹಚ್ಚಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಹಾಗೂ ಜೋಕಟ್ಟೆಯಲ್ಲಿ ತಡೆಗೋಡೆ ಕುಸಿತದಿಂದ ಮೃತಪಟ್ಟ ಬಾಲಕ ದಲಿತ ಸಮುದಾಯಕ್ಕೆ ಸೇರಿದ ಬಡ ಕುಟುಂಬವಾಗಿದೆ, ಕುಟುಂಬಕ್ಕೆ ಹಾಗೂ ಗಾಯಗೊಂಡವರಿಗೆ ಗರಿಷ್ಟ ಪರಿಹಾರವನ್ನು ಸರಕಾರ ಒದಗಿಸಬೇಕು ಮತ್ತು ತಡೆಗೋಡೆ ಕುಸಿತದಿಂದ ಮನೆ ಭಾಗಶಃ ಹಾನಿಯಾಗಿರುವುದರಿಂದ ಪುನರ್ವಸತಿ ಕಲ್ಪಿಸಬೇಕೆಂದು ಜಮಾಲ್ ಜೋಕಟ್ಟೆ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ

 

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!