ಜನ ಮನದ ನಾಡಿ ಮಿಡಿತ

Advertisement

ಜೋಕಟ್ಟೆಯಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಮೃತ್ಯು..!

ಮಂಗಳೂರು: ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ತಡೆಗೋಡೆಗಳು ಕುಸಿದು ಬಿದ್ದು ಜೀವಹಾನಿಗಳು ಸಂಭವಿಸುತ್ತಿದೆ ಆದರೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಂಪೂರ್ಣ ವಿಫಲವಾಗಿದೆ.

ಅದರ ಮುಂದುವರಿದ ಭಾಗವಾಗಿ ನಿನ್ನೆ ತಡರಾತ್ರಿ ಜೋಕಟ್ಟೆಯಲ್ಲಿ ಮನೆಯ ಮೇಲೆ ತಡೆಗೋಡೆ ಬಿದ್ದು ಅಪ್ರಾಪ್ತ ದಲಿತ ಬಾಲಕನೋರ್ವ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಉಳ್ಳಾಲ ತಾಲೂಕಿನ ಕುತ್ತಾರು ಸಮೀಪ ತಡೆಗೋಡೆ ಬಿದ್ದು ಒಂದೇ ಕುಟುಂಬದ ನಾಲ್ಕು ಸದಸ್ಯರು ಮೃತಪಟ್ಟ ಬಳಿಕವೂ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ವಿಫಲವಾಗಿದೆ.ಅದರ ನಂತರ ಅನೇಕ ಕಡೆ ತಡೆಗೋಡೆ ಕುಸಿದಿದೆ,ನಿನ್ನೆ ತಡರಾತ್ರಿ ಜೋಕಟ್ಟೆಯಲ್ಲಿ ತಡೆಗೋಡೆ ಕುಸಿದು ಒಬ್ಬನ ಜೀವಹಾನಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಮಳೆ ಬರುವ ಮುನ್ಸೂಚನೆ ಇರುವಾಗ ಕೇವಲ ಶಾಲೆಗೆ ರಜೆ ಕೊಟ್ಟ ಮಾತ್ರಕ್ಕೆ ಜಿಲ್ಲಾಡಳಿತದ ಕೆಲಸ ಮುಗಿಯುವುದಿಲ್ಲ,ಇಂತಹ ಅಪಾಯಕಾರಿ ತಡೆಗೋಡೆ,ಬರೆ ಜರಿತ ಸಾಧ್ಯ ಇರುವ ಬೆಟ್ಟ ಗುಡ್ಡ ಪ್ರದೇಶಗಳನ್ನು ಗುರುತಿಸಿ ಅಲ್ಲಿಂದ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡುವಂತಹ ಹಾಗೂ ಅವರಿಗೆ ಸೂಕ್ತ ವ್ಯವಸ್ಥೆಗಳನ್ನು ಮಾಡುವ ಕೆಲಸ ಮಾಡಬೇಕು. ಅದೇ ರೀತಿ ಇಂತಹ ಅಪಾಯಕಾರಿ ಪ್ರದೇಶ ಎಲ್ಲೆಲ್ಲಾ ಇವೆ ಎಂದು ಜಿಲ್ಲೆಯ ಎಲ್ಲಾ ಸ್ಥಳೀಯಾಡಳಿತ ಗಳಿಗೆ ಅಥವಾ ಇದಕ್ಕೆಂದೇ ಜಿಲ್ಲಾಡಳಿತದಿಂದ ನೇಮಿಸಲ್ಪಟ್ಟ ವಿಶೇಷ ತಂಡಗಳಿಗೆ ನಿರ್ದೇಶನ ನೀಡಿ ಪತ್ತೆ ಹಚ್ಚಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಹಾಗೂ ಜೋಕಟ್ಟೆಯಲ್ಲಿ ತಡೆಗೋಡೆ ಕುಸಿತದಿಂದ ಮೃತಪಟ್ಟ ಬಾಲಕ ದಲಿತ ಸಮುದಾಯಕ್ಕೆ ಸೇರಿದ ಬಡ ಕುಟುಂಬವಾಗಿದೆ, ಕುಟುಂಬಕ್ಕೆ ಹಾಗೂ ಗಾಯಗೊಂಡವರಿಗೆ ಗರಿಷ್ಟ ಪರಿಹಾರವನ್ನು ಸರಕಾರ ಒದಗಿಸಬೇಕು ಮತ್ತು ತಡೆಗೋಡೆ ಕುಸಿತದಿಂದ ಮನೆ ಭಾಗಶಃ ಹಾನಿಯಾಗಿರುವುದರಿಂದ ಪುನರ್ವಸತಿ ಕಲ್ಪಿಸಬೇಕೆಂದು ಜಮಾಲ್ ಜೋಕಟ್ಟೆ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ

 

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!