ಕರಾವಳಿ

ಪ್ರತಿಷ್ಠಿತ ಅಗರಿ ಪ್ರಶಸ್ತಿ, ಸನ್ಮಾನ, ಸಂಸ್ಮರಣೆ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಸಾಧಕ ಸನ್ಮಾನ, ಬಯಲಾಟ ಮತ್ತು ಯುವ ಚೇತನ ಹೊಸಬೆಟ್ಟು ವಾರ್ಷಿಕೋತ್ಸವ ಜಂಟಿ ಪತ್ರಿಕಾಗೋಷ್ಠಿ

ದಕ್ಷಿಣ ಕನ್ನಡ:”ಅಗರಿ ಶ್ರೀನಿವಾಸ ಭಾಗವತ ಸಂಸ್ಮರಣೆ ವೇದಿಕೆ” ಸುರತ್ಕಲ್ ಮತ್ತು
“ಯುವಚೇತನ ಹೊಸಬೆಟ್ಟು”, ಕುಳಾಯಿ ಇದರ 31ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಜೊತೆಗೆ ಅಗರಿ ಪ್ರಶಸ್ತಿ, ಅಗರಿ ರಘುರಾಮ ಸಮ್ಮಾನ ಅಗರಿ ಸಂಸ್ಮರಣೆ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮವು ಇದೆ ಜೂಲೈ ೨೮ ರಂದು ಭಾನುವಾರ ಬೆಳಗ್ಗೆ ೯ ರಿಂದ ನವಾಗಿರಿ ಕಲ್ಯಾಣ ಮಂಟಪ, ಹೊಸಬೆಟ್ಟು ಇಲ್ಲಿ ನಡೆಯಲಿದೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುವಚೇತನ, ಹೊಸಬೆಟ್ಟು, ಕುಳಾಯಿ ಇದರ 31ನೇ ವಾರ್ಷಿಕೋತ್ಸವ ಸಮಾರಂಭ ಬೆಳಿಗ್ಗೆ 9.30 ರಿಂದ ಆರಂಭಗೊಳ್ಳಲಿದ್ದು ಬ್ರಾಹ್ಮಣ ಸಮುದಾಯದವರಿಗಾಗಿ“ಭಲೇ ಜೋಡಿ ಸೀಸನ್ -3″ ಏರ್ಪಡಿಸಲಾಗಿದ್ದು ಸ್ಪರ್ಧೆಗೆ ವಯೋಮಿತಿ ಇಲ್ಲ ಮತ್ತು
ಒಂದು ತಂಡದಲ್ಲಿ ಇಬ್ಬರು ಇರಬೇಕು ಎಂಬ ನಿಬಂಧನೆಗೊಳಪಟ್ಟಿರುತ್ತದೆ ಹಾಗೂ ಈ ಕಾರ್ಯಕ್ರಮವನ್ನು ಶ್ರೀಮತಿ ಜಯಶ್ರೀ, (ನಿವೃತ್ತ ಮುಖ್ಯೋಪಾಧ್ಯಾಯಿನಿ) ಉದ್ಘಾಟಿಸಲಿದ್ದು ವಿನೂತನ ಸ್ಪರ್ಧೆ ವಿಜೇತರಿಗೆ ಭರ್ಜರಿ ಬಹುಮಾನ ದೊರೆಯಲಿದೆ, ಹಾಗೂ ಈಗಾಗಲೇ ನಡೆದ ಹಲವು ಸ್ಪರ್ಧೆಗಳ ಬಹುಮಾನವನ್ನು ವಿತರಿಸಲಾಗುವುದು. ಮಧ್ಯಾಹ್ನ 03.00ಕ್ಕೆ ಸಭಾ ಕಾರ್ಯಕ್ರಮವಿದ್ದು ಈ ಕಾರ್ಯಕ್ರಮದಲ್ಲಿ ಅಗರಿ ಸಂಸ್ಮರಣೆ, ಅಗರಿ ಪ್ರಶಸ್ತಿ ಪ್ರದಾನ, ಅಗರಿ ರಘುರಾಮ ಸಮ್ಮಾನ ಕಾರ್ಯಕ್ರಮವಿದೆ ಎಂದು ಸಂಘಟನೆಯು ತಿಳಿಸಿದ್ದು
ಜೊತೆಗೆ ವಿದ್ಯಾರ್ಥಿ ವೇತನ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವಿದ್ದು ಕಾರ್ಯಕ್ರಮದ ಸಭಾಧ್ಯಕ್ಷರಾಗಿ ಉದ್ಯಮಿ ಶ್ರೀಪತಿಭಟ್ ಆಗಮಿಸಲಿದ್ದು, ಕಟೀಲು ಹರಿನಾರಾಯಣದಾಸ ಅಸ್ರಣ್ಣ ಆಶೀರ್ವಚನ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾನ್ಯ ಲೋಕಸಭಾ ಸದಸ್ಯರು, ದ.ಕ. ಶ್ರೀಕಾಂತ ಭಟ್  ಮಾಲಕರು, ತರಂಗ ಇಲೆಕ್ಟ್ರಾನಿಕ್ಸ್, ಕುಮಟಾ, ಗುರುರಾಜ ಆಚಾರ್ ಹೊಸಬೆಟ್ಟು, ರಮೇಶ್ ರಾವ್, ಶಾಲಾ ಸಂಚಾಲಕರು, ಸ.ಹಿ.ಪ್ರಾಥಮಿಕ ಶಾಲೆ, ಪೆರ್ಮುದೆ ಇರಲಿದ್ದು ಪುತ್ತಿಗೆ ರಘುರಾಮ ಹೊಳ್ಳ, ಅಭಿಜ್ಞ ಯಕ್ಷಗಾನ ಭಾಗವತರು ಇವರಿಗೆ ಅಗರಿ ಪ್ರಶಸ್ತಿಯನ್ನು ನೀಡಲಾಗುವುದು, ಅಗರಿ ರಘುರಾಮ ಸನ್ಮಾನವನ್ನು ಯಕ್ಷಕಲಾರಂಗ (ರಿ) ಉಡುಪಿ, ಯಕ್ಷಗಾನ ಮತ್ತು ಸಾಮಾಜಿಕ ಸೇವಾ ಸಂಸ್ಥೆಗೆ ನೀಡಲಿದ್ದು ಅಗರಿ ಸಂಸ್ಕರಣೆ ಯನ್ನು ವಿದುಷಿ ಸುಮಂಗಲಾ ರತ್ನಾಕರ್ ಭರತನಾಟ್ಯ ಮತ್ತು ಯಕ್ಷಗಾನ ಕಲಾವಿದರು ಮಾಡಲಿದ್ದಾರೆ.

ಅಭಿನಂದನಾ ಭಾಷಣವನ್ನು ವಾದಿರಾಜ ಕಲ್ಲೂರಾಯ, ಉಪನ್ಯಾಸಕರು ಮತ್ತು ಯಕ್ಷಗಾನ ಕಲಾವಿದರು ನಡೆಸಿಕೊಡಲಿದ್ದು  ಸಾಧನೆಗೈದ ಸದಸ್ಯರುಗಳಿಗೆ ಅಭಿನಂದನಾ ಸನ್ಮಾನವಿದ್ದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಹೇಳಿದ ನಿಧಿಶಾ ಹೊಸಬೆಟ್ಟು, ರಾಘವೇಂದ್ರ ಎಚ್.ವಿ., ರಾಕೇಶ್ ಹೊಸಬೆಟ್ಟು ಇವರನ್ನು ಸನ್ಮಾನಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದು, ಸಂಜೆ 5:30 ನಂತರ ಯಕ್ಷಗಾನ ಬಯಲಾಟ ನಡೆಯಲಿದ್ದು ಸಕ್ರಿಯವಾಗಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಪತ್ರಿಕಾಗೋಷ್ಟಿಯಲ್ಲಿ ಅಗರಿ ರಾಘವೇಂದ್ರ ರಾವ್, ಯುವಚೇತನ ಹೊಸಬೆಟ್ಟು ಅಧ್ಯಕ್ಷ ಪ್ರಶಾಂತ್ ರಾವ್ ಹೆಚ್., ಉಪಾಧ್ಯಕ್ಷ ಅಗರಿ ಕಿರಣ್ ರಾವ್, ಶೇಷಶಯನ, ಅಗರಿ ಅಭಿನಿತ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

 

 

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

11 hours ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

3 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

4 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

4 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago