ಜನ ಮನದ ನಾಡಿ ಮಿಡಿತ

Advertisement

*ಪ್ರಾಕ್ರತೀಕ ವಿಕೋಪ ಭಯಾನಕ ಪರಿಸ್ಥಿತಿಯಲ್ಲೂ ನೇಪಾಲದ ಮುಕ್ತಿನಾಥನ ದರ್ಶನ ಪಡೆದ ತುಳುನಾಡ ಭಕ್ತರು*

 

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿ ಹೂವಿನ ವ್ಯಾಪಾರಿ ಜಯ ಕುಮಾರ್ ಮತ್ತು ಜಯಶ್ರೀ ದಂಪತಿಗಳ ನೇತೃತ್ವದ ಬಳಗವು ಕಳೆದ 20 ವರ್ಷಗಳಿಂದ ಯಾವುದೇ ಪ್ರತಿ ಫಲಾಫೇಕ್ಷೆ ಪಡೆಯದೆ ಕರಾವಳಿ ಭಾಗದ ಎಲ್ಲಾ ಕಡೆಗಳಲ್ಲಿನ ಅಫೇಕ್ಸಿತ ಭಕ್ತರನ್ನು ಒಟ್ಟುಗೂಡಿಸಿಕೊಂಡು ದೇಶದ ವಿವಿಧ ಪುಣ್ಯ ತೀರ್ಥ ಕ್ಷೆತ್ರಗಳನ್ನು ಭೇಟಿ ಮಾಡಿಸಿ ದೇವರ ದರ್ಶನ ಭಾಗ್ಯವನ್ನು ತೋರಿಸಿ ಕೊಟ್ಟವರು.

 

 

ಅದರಂತೆ 21 ನೇ ವರ್ಷದಲ್ಲಿ ಹಮ್ಮಿಕೊಂಡ ಪುಣ್ಯ ತೀರ್ಥ ಕ್ಷೆತ್ರಗಳಲ್ಲಿ ನೇಪಾಲ ದೇಶದಲ್ಲಿ ಇರುವ ಚೀನಾ ಗಡಿ ಭಾಗದಲ್ಲಿನ ಮುಕ್ತಿನಾಥ ದೇವಸ್ಥಾನವೂ ಒಂದಾಗಿರುತ್ತದೆ.
ಅದರಂತೆ ಜಯಕುಮಾರ್ ನೇತೃತ್ವ ತಂಡದಲ್ಲಿನ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗದ ಸುಮಾರು 117 ಮಂದಿ ಭಕ್ತರು ಒರಿಸ್ಸಾದ ಪುರಿ ಜಗನಾಥ ದೇವಾಲಯ, ಜಾರ್ಕಂಡ್ ನಲ್ಲಿನ ಬಾಬಾ ಬೈದ್ಯಾನಾಥ ದೇವಸ್ಥಾನ, ನೇಪಾಲದ ಜನಕಗಿರಿಯ ಸೀತಾಮಾತಾ ಮಂದಿರ, ಪಶುಪತಿ ದೇವಾಲಯ ದರ್ಶನ್ ಪಡೆದುಕೊಂಡು ಪರಮ ಪವಿತ್ರ ಕ್ಷೆತ್ರವಾದ ಮುಕ್ತಿನಾಥನ.

ದರ್ಶನಕ್ಕೆಂದು ಹೊರಟು ರಸ್ತೆ ಸಾಗುವ ಸಂದರ್ಭದಲ್ಲಿ ದೊಡ್ಡದಾದೊಂದು ಗುಡ್ಡವೊಂದು ಜರಿದು ಬಿದ್ದು ಮುಕ್ತಿನಾಥ ದೇವಸ್ಥಾನ ಸಂಚಾರಕ್ಕೆ ಅಡಚಣೆಯಾಗಿತ್ತು.
ಮಾರ್ಗ ಮದ್ಯೆ ಭಕ್ತರನೊಳಗೊಂಡ ಬಸ್ ಗಳು ನಿಂತಿರುವಾಗ ದೊಡ್ಡ ದೊಡ್ಡ ಬಂಡೆಕಲ್ಲುಗಳು ಉರುಳಿಬಿದ್ದು ಬಸ್ಸಿನ ಮೇಲೆ ಬಿದ್ದುದರಿಂದ ಸ್ವಲ್ಪದರಲ್ಲೇ ಕೆಳಗಿರುವ ಭಕ್ತರು ಪ್ರಾಣಪಾಯದಿಂದ ಪಾರಾಗಿರುವುದು ಪವಾಡವೇ ಸರಿ,
ಕೆಲವೊಂದು ಕಡೆಗಳಲ್ಲಿ ರಸ್ತೆಯು ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು ಪ್ರಯಾಣಿಕರು ತುಂಬಿಕೊಂಡಿರುವ ಬಸ್ಸುಗಳನ್ನು ಹಗ್ಗ ಕಟ್ಟಿ ಎಲೆದಾಡಿ, ದೂಡಿಕೊಂಡು ಹೋಗಿರುವುದು.

 

ಇಂತಹ ಪ್ರಾಕ್ರತೀಕ ವಿಕೋಪದ ಭಯಾನಕ ಸಂಕಷ್ಟ ಹಾದಿಯಲ್ಲೂ ಭಕ್ತರಿಗೆ ಧೈರ್ಯ ತುಂಬಿಸಿದ ಜಯಕುಮಾರ್ ರವರು, ಹಾಗೇನೇ ವಾಹನ ಚಾಲಕರೂ ಸಮೇತ ಇದಕ್ಕೆ ಸಾಥ್ ನೀಡಿರುವುದರಿಂದ ಕರಾವಳಿಯ ತುಳುನಾಡ 117 ಮಂದಿ ಭಕ್ತರು ಜೀವದ ಹಂಗು ತೊರೆದು ನೇಪಾಲ ಮುಕ್ತಿನಾಥ ದೇವರ ದರ್ಶನ ಪಡೆದು ಅಯೋದ್ಯೆ ದತ್ತ ಪ್ರಯಾಣ ಬೆಳೆಸಿದರು.
ಮುಂದೆ ಕಾಶಿ ವಿಶ್ವನಾಥ ದೇವಾಲಯ, ವೈಷ್ಣನೋ ದೇವಿ ದರ್ಶನ್ ಮುಗಿಸಿ ಮಂಗಳೂರಿಗೆ ವಾಪಸ್ ಅಗಲಿರುವರು ಎಂದೂ ತೆರಲಿರುವ ಭಕ್ತರೋರ್ವರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!