ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪಾಕೃತಿಕ ವಿಕೋಪ; ಲಕ್ಷಾಂತರ ರೂ. ನಷ್ಟ

ಬಂಟ್ವಾಳ: ಮಳೆಗಾಲ ಆರಂಭವಾದ ಬಳಿಕ ನಿತ್ಯ ತಾಲೂಕಿನಲ್ಲಿ ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸುತ್ತಿದ್ದು, ಜುಲೈ 26 ರ ಶುಕ್ರವಾರ ಅನೇಕ ಮನೆಗಳಿಗೆ ಹಾನಿಯಾಗಿದೆ.
ನರಿಕೊಂಬು ಗ್ರಾಮದ ಮಿತ್ತಿಲಕೋಡಿ ನಾರಾಯಣ ಸಪಲ್ಯ ಅವರ ಮನೆಗೆ ಮರಬಿದ್ದು ಭಾಗಶ: ಹಾನಿಯಾದ ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್, ಸದಸ್ಯ ರಾದ ರಂಜಿತ್ ಕೆದ್ದೆಲ್, ರವಿ ಅಂಚನ್, ಅಬೆರೊಟ್ಟು, ಗ್ರಾಮ ಸಹಾಯಕ ಲಕ್ಷ್ಮಣ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಅನೇಕ ಮನೆಗಳಿಗೆ ಹಾನಿಯಾಗಿದ್ದು, ಬಾಳ್ತಿಲ ಗ್ರಾಮದ ದಾಸಕೋಡಿ ನಿವಾಸಿ ದಾಮೋದರ ಪೂಜಾರಿ ಅವರ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಪುದು ಗ್ರಾಮದ ಜುಮಾದಿಗುಡ್ಡೆ ಎಂಬಲ್ಲಿ ಸೆಲಿಮ್ ರವರ ಮನಗೆ ಮರಬಿದ್ದು ಹಾನಿಯಾಗಿದೆ.ತುಂಬೆ ಗ್ರಾಮದ ಸಾರಮ್ಮ ಎಂಬವರ ಮನೆಗೆ ಪಕ್ಕದ ಮನೆಯ ಶೀಟ್ ಬಿದ್ದು ಹಂಚು ಪುಡಿಯಾಗಿ ರಿಯಾಜ್ ಎಂಬವರಿಗೆ ಗಾಯವಾಗಿದೆ.
ಪುದು ಗ್ರಾಮದ ಹಸನಬ್ಬ ಅವರ ಮನೆಯ ಹಂಚು ಗಾಳಿಗೆ ಹಾರಿಹೋಗಿದೆ, ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಇಬ್ರಾಹಿಂ ಅವರ ಮನೆಗೆ ಹಾಗೂ ಗೋಡೆಗೆ ಹಾನಿಯಾಗಿದೆ.ಪುದು ಗ್ರಾಮದ ಮಾರಿಪಳ್ಳ ಚಂದ್ರಕಲಾ ಅವರ ಮನೆಯ ಹಂಚು ಗಾಳಿಗೆ ಹಾರಿಹೋಗಿದೆ. ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಮೊಯಿದ್ದೀನ್ ಅವರ ಮನೆಯ ಹಂಚು ಹಾಗು ಗೋಡೆಗೆ ಹಾನಿಯಾಗಿದೆ.ಮಾಣಿ ಗ್ರಾಮದ ಸೂರಿಕುಮೇರು ನಿವಾಸಿ ಚೆನ್ನಮ್ಮ ಅವರ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.

 

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!