ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪಾಕೃತಿಕ ವಿಕೋಪ; ಲಕ್ಷಾಂತರ ರೂ. ನಷ್ಟ

ಬಂಟ್ವಾಳ: ಮಳೆಗಾಲ ಆರಂಭವಾದ ಬಳಿಕ ನಿತ್ಯ ತಾಲೂಕಿನಲ್ಲಿ ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸುತ್ತಿದ್ದು, ಜುಲೈ 26 ರ ಶುಕ್ರವಾರ ಅನೇಕ ಮನೆಗಳಿಗೆ ಹಾನಿಯಾಗಿದೆ.
ನರಿಕೊಂಬು ಗ್ರಾಮದ ಮಿತ್ತಿಲಕೋಡಿ ನಾರಾಯಣ ಸಪಲ್ಯ ಅವರ ಮನೆಗೆ ಮರಬಿದ್ದು ಭಾಗಶ: ಹಾನಿಯಾದ ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್, ಸದಸ್ಯ ರಾದ ರಂಜಿತ್ ಕೆದ್ದೆಲ್, ರವಿ ಅಂಚನ್, ಅಬೆರೊಟ್ಟು, ಗ್ರಾಮ ಸಹಾಯಕ ಲಕ್ಷ್ಮಣ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಅನೇಕ ಮನೆಗಳಿಗೆ ಹಾನಿಯಾಗಿದ್ದು, ಬಾಳ್ತಿಲ ಗ್ರಾಮದ ದಾಸಕೋಡಿ ನಿವಾಸಿ ದಾಮೋದರ ಪೂಜಾರಿ ಅವರ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಪುದು ಗ್ರಾಮದ ಜುಮಾದಿಗುಡ್ಡೆ ಎಂಬಲ್ಲಿ ಸೆಲಿಮ್ ರವರ ಮನಗೆ ಮರಬಿದ್ದು ಹಾನಿಯಾಗಿದೆ.ತುಂಬೆ ಗ್ರಾಮದ ಸಾರಮ್ಮ ಎಂಬವರ ಮನೆಗೆ ಪಕ್ಕದ ಮನೆಯ ಶೀಟ್ ಬಿದ್ದು ಹಂಚು ಪುಡಿಯಾಗಿ ರಿಯಾಜ್ ಎಂಬವರಿಗೆ ಗಾಯವಾಗಿದೆ.
ಪುದು ಗ್ರಾಮದ ಹಸನಬ್ಬ ಅವರ ಮನೆಯ ಹಂಚು ಗಾಳಿಗೆ ಹಾರಿಹೋಗಿದೆ, ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಇಬ್ರಾಹಿಂ ಅವರ ಮನೆಗೆ ಹಾಗೂ ಗೋಡೆಗೆ ಹಾನಿಯಾಗಿದೆ.ಪುದು ಗ್ರಾಮದ ಮಾರಿಪಳ್ಳ ಚಂದ್ರಕಲಾ ಅವರ ಮನೆಯ ಹಂಚು ಗಾಳಿಗೆ ಹಾರಿಹೋಗಿದೆ. ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಮೊಯಿದ್ದೀನ್ ಅವರ ಮನೆಯ ಹಂಚು ಹಾಗು ಗೋಡೆಗೆ ಹಾನಿಯಾಗಿದೆ.ಮಾಣಿ ಗ್ರಾಮದ ಸೂರಿಕುಮೇರು ನಿವಾಸಿ ಚೆನ್ನಮ್ಮ ಅವರ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.

 

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!