ಬಂಟ್ವಾಳ: ಮಳೆಗಾಲ ಆರಂಭವಾದ ಬಳಿಕ ನಿತ್ಯ ತಾಲೂಕಿನಲ್ಲಿ ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸುತ್ತಿದ್ದು, ಜುಲೈ 26 ರ ಶುಕ್ರವಾರ ಅನೇಕ ಮನೆಗಳಿಗೆ ಹಾನಿಯಾಗಿದೆ.
ನರಿಕೊಂಬು ಗ್ರಾಮದ ಮಿತ್ತಿಲಕೋಡಿ ನಾರಾಯಣ ಸಪಲ್ಯ ಅವರ ಮನೆಗೆ ಮರಬಿದ್ದು ಭಾಗಶ: ಹಾನಿಯಾದ ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್, ಸದಸ್ಯ ರಾದ ರಂಜಿತ್ ಕೆದ್ದೆಲ್, ರವಿ ಅಂಚನ್, ಅಬೆರೊಟ್ಟು, ಗ್ರಾಮ ಸಹಾಯಕ ಲಕ್ಷ್ಮಣ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಅನೇಕ ಮನೆಗಳಿಗೆ ಹಾನಿಯಾಗಿದ್ದು, ಬಾಳ್ತಿಲ ಗ್ರಾಮದ ದಾಸಕೋಡಿ ನಿವಾಸಿ ದಾಮೋದರ ಪೂಜಾರಿ ಅವರ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಪುದು ಗ್ರಾಮದ ಜುಮಾದಿಗುಡ್ಡೆ ಎಂಬಲ್ಲಿ ಸೆಲಿಮ್ ರವರ ಮನಗೆ ಮರಬಿದ್ದು ಹಾನಿಯಾಗಿದೆ.ತುಂಬೆ ಗ್ರಾಮದ ಸಾರಮ್ಮ ಎಂಬವರ ಮನೆಗೆ ಪಕ್ಕದ ಮನೆಯ ಶೀಟ್ ಬಿದ್ದು ಹಂಚು ಪುಡಿಯಾಗಿ ರಿಯಾಜ್ ಎಂಬವರಿಗೆ ಗಾಯವಾಗಿದೆ.
ಪುದು ಗ್ರಾಮದ ಹಸನಬ್ಬ ಅವರ ಮನೆಯ ಹಂಚು ಗಾಳಿಗೆ ಹಾರಿಹೋಗಿದೆ, ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಇಬ್ರಾಹಿಂ ಅವರ ಮನೆಗೆ ಹಾಗೂ ಗೋಡೆಗೆ ಹಾನಿಯಾಗಿದೆ.ಪುದು ಗ್ರಾಮದ ಮಾರಿಪಳ್ಳ ಚಂದ್ರಕಲಾ ಅವರ ಮನೆಯ ಹಂಚು ಗಾಳಿಗೆ ಹಾರಿಹೋಗಿದೆ. ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಮೊಯಿದ್ದೀನ್ ಅವರ ಮನೆಯ ಹಂಚು ಹಾಗು ಗೋಡೆಗೆ ಹಾನಿಯಾಗಿದೆ.ಮಾಣಿ ಗ್ರಾಮದ ಸೂರಿಕುಮೇರು ನಿವಾಸಿ ಚೆನ್ನಮ್ಮ ಅವರ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…