ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ತಾಲ್ಲೂಕು ಬನ್ನೂರು ಕರ್ಮಲದಲ್ಲಿ ನಿರಾಶ್ರಿತ ಗೋವುಗಳೆರಡಕ್ಕೆ ತಾತ್ಕಾಲಿಕ ನೆಲೆ ಕಲ್ಪಿಸಿದ ವಿಹಿಂಪ, ಬಿಜೆಪಿ ನಾಯಕರು

ಬನ್ನೂರು ಕರ್ಮಲದಲ್ಲಿ ನಿರಾಶ್ರಿತ ಗೋವುಗಳೆರಡು ಕಳೆದೆರಡು ದಿನಗಳಿಂದಿರುವುದನ್ನು ಗಮನಿಸಿದ ಸ್ಥಳೀಯರ ಮಾಹಿತಿ ಮೇರೆಗೆ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಮತ್ತು ವಿಶ್ವಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಅವರು ಅವುಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವ ಕಾರ್ಯ ಮಾಡಿದ್ದಾರೆ.

ಬನ್ನೂರು ಕರ್ಮಲದಲ್ಲಿರುವ ಬಲಮುರಿ ದೇವಸ್ಥಾನದ ಬಳಿಯಲ್ಲಿ ವಿವೇಕಾನಂದ ಕಾಲೇಜಿಗೆ ಹೋಗುವ ರಸ್ತೆಯ ಬದಿಯ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಗೋವುಗಳೆರಡು ಹಗಲು ರಾತ್ರಿ ಇರುವುದನ್ನು ಸ್ಥಳೀಯರಾದ ಎಂ.ಜಿ.ನಾಯಕ್ ಉಷಾ ದಂಪತಿ ಮತ್ತು ಅವರ ಪುತ್ರಿ ಡಾ. ದೀಕ್ಷಾ ಅವರು ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಅವರಿಗೆ ಮಾಹಿತಿ ನೀಡಿದಂತೆ ಜು.27ರಂದು ವಿಶ್ವಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಅವರು ಗೋವುಗಳಿರುವ ಸ್ಥಳಕ್ಕೆ ಭೇಟಿ ನೀಡಿ ಗೋವುಗಳೆರಡನ್ನು ತಾತ್ಕಾಲಿಕ ನೆಲೆಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗೋ ಶಾಲೆಯ ಬಳಿ ಬಿಡುವ ಕುರಿತು ದೇವಳದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿಯವರಲ್ಲಿ ಅನುಮತಿ ಪಡೆದು ದೇವಳದ ಗೋ ಶಾಲೆ ಬಳಿ ಕಟ್ಟಿ ಹಾಕಲಾಗಿದೆ.

ವಾರಿಸುದಾರರು ಇದ್ದಲ್ಲಿ ಸಂಪರ್ಕಿಸಿ

ಹದ ಕೆಂಪು ಬಣ್ಣ ಮತ್ತು ಕಪ್ಪು ಬಣ್ಣದ ಗೋವುಳೆರಡರ ಕತ್ತಿನಲ್ಲಿ ಸಣ್ಣ ಗಂಟೆ ಸಹಿತ ದಾರವಿದೆ. ಗೋವುಗಳ ವಾರಿಸುದಾರರು ಇದ್ದಲ್ಲಿ ಸರಿಯಾದ ಮಾಹಿತಿ ನೀಡಿ ಗೋವನ್ನು ಕರೆದೊಯ್ಯಬಹುದು ಎಂದು ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್ ಅವರು ತಿಳಿಸಿದ್ದಾರೆ.

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಮತ್ತು ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಅವರ ನೇತೃತ್ವದಲ್ಲಿ ನಗರಸಭಾ ಸದಸ್ಯೆ ಪ್ರೇಮ ನಂದಿಲ, ಸ್ಥಳಿಯರಾದ ಶೇಖ‌ರ್, ಸಚಿನ್, ಪದ್ಮನಾಭ, ರವಿ, ರಾಜೇಶ್, ನಿರಂಜನ, ಆನಂದ ಮತ್ತು ಪಿಕಪ್ ಚಾಲಕ ರಾಜೇಶ್ ಗೋವುಗಳನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವಲ್ಲಿ ಸಹಕರಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!