ಜನ ಮನದ ನಾಡಿ ಮಿಡಿತ

Advertisement

ದೂರದರ್ಶನ ಕಲಾವಿದೆಯಾಗಿ ಅಯನಾ. ವಿ. ರಮಣ್ ಆಯ್ಕೆ

ಬಹುಮುಖ ಪ್ರತಿಭೆಯ ಹೆಸರಾಂತ ಕಲಾವಿದೆ ಅಯನಾ. ವಿ. ರಮಣ್ ಮೂಡುಬಿದಿರೆ, ದೂರದರ್ಶನ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ .
ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿ ಶೇಖರ್ ಮಾರ್ಗದರ್ಶನದಲ್ಲಿ , ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಎದುರಿಸಿದ್ದ ಅವರು ” ಬಿ ” ಗ್ರೇಡ್ ಮಾನ್ಯತೆ ಪಡೆದಿದ್ದಾರೆ .

ಬೆಂಗಳೂರಿನ ಕರ್ನಾಟಕ ಕಲಾಶ್ರೀ ವಿದ್ವಾನ್ ಸತ್ಯನಾರಾಯಣ ರಾಜು ಅವರಲ್ಲಿ ವಿಶೇಷ ತರಬೇತಿ ಪಡೆಯುತ್ತಿರುವ ಅಯನಾ ಸಾಧನೆಗೆ ಉಡುಪಿ ಶ್ರೀ ಕೃಷ್ಣ ಮಠ – ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇ0ದ್ರ ತೀರ್ಥ ಶ್ರೀಪಾದರು ಆಶೀರ್ವಾದ ಪೂರ್ವಕವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು , ಅಯನಾ .ವಿ. ರಮಣ್ ನಡೆಸುವ ನೃತ್ಯ ಸಂಸ್ಥೆ “ನಾಟ್ಯಾಯನ ಮೂಡುಬಿದಿರೆ ” ಮತ್ತು ನೃತ್ಯ ಗುರುವಾಗಿರುವ
“ರಂಗಭಾರತಿ ಕಲಾಮಂದಿರಮ್”, ಕುಶಾಲನಗರ , ಸಂಸ್ಥೆಗಳ ಪದಾಧಿಕಾರಿಗಳು- ವಿದ್ಯಾರ್ಥಿಗಳು- ಹೆತ್ತವರು ಅಭಿನಂದಿಸಿದ್ದಾರೆ . ಮನೆ- ಮನೆಗೆ ಭರತನಾಟ್ಯ ಮತ್ತು ವಿಶಿಷ್ಟವಾದ ನಾಟ್ಯಾಯನ ಕಾರ್ಯಕ್ರಮಗಳನ್ನು ದೇಶ – ವಿದೇಶಗಳಲ್ಲಿ ಪ್ರದರ್ಶನ ಮಾಡುತ್ತಿರುವ ಅಯನಾ ಮೈಸೂರು ವಿವಿ ಯಲ್ಲಿ ಆಂಗ್ಲ ಭಾಷೆಯ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಡಾ . ಮುಕಾಂಬಿಕಾ .ಜಿ. ಎಸ್ ಮತ್ತು ಶ್ರೀ ಪುತ್ತಿಗೆ ಮಠದ ಕೋಟಿ ಗೀತಾ ಲೇಖನ ಯಜ್ಞ ಪ್ರಚಾರಕ
ಕೆ. ವಿ. ರಮಣ್ ಆಚಾರ್ಯ ದಂಪತಿಯ ಪುತ್ರಿಯಾಗಿದ್ದಾರೆ .

 

 

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!