ಕರಾವಳಿ

ದೂರದರ್ಶನ ಕಲಾವಿದೆಯಾಗಿ ಅಯನಾ. ವಿ. ರಮಣ್ ಆಯ್ಕೆ

ಬಹುಮುಖ ಪ್ರತಿಭೆಯ ಹೆಸರಾಂತ ಕಲಾವಿದೆ ಅಯನಾ. ವಿ. ರಮಣ್ ಮೂಡುಬಿದಿರೆ, ದೂರದರ್ಶನ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ .
ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿ ಶೇಖರ್ ಮಾರ್ಗದರ್ಶನದಲ್ಲಿ , ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಎದುರಿಸಿದ್ದ ಅವರು ” ಬಿ ” ಗ್ರೇಡ್ ಮಾನ್ಯತೆ ಪಡೆದಿದ್ದಾರೆ .

ಬೆಂಗಳೂರಿನ ಕರ್ನಾಟಕ ಕಲಾಶ್ರೀ ವಿದ್ವಾನ್ ಸತ್ಯನಾರಾಯಣ ರಾಜು ಅವರಲ್ಲಿ ವಿಶೇಷ ತರಬೇತಿ ಪಡೆಯುತ್ತಿರುವ ಅಯನಾ ಸಾಧನೆಗೆ ಉಡುಪಿ ಶ್ರೀ ಕೃಷ್ಣ ಮಠ – ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇ0ದ್ರ ತೀರ್ಥ ಶ್ರೀಪಾದರು ಆಶೀರ್ವಾದ ಪೂರ್ವಕವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು , ಅಯನಾ .ವಿ. ರಮಣ್ ನಡೆಸುವ ನೃತ್ಯ ಸಂಸ್ಥೆ “ನಾಟ್ಯಾಯನ ಮೂಡುಬಿದಿರೆ ” ಮತ್ತು ನೃತ್ಯ ಗುರುವಾಗಿರುವ
“ರಂಗಭಾರತಿ ಕಲಾಮಂದಿರಮ್”, ಕುಶಾಲನಗರ , ಸಂಸ್ಥೆಗಳ ಪದಾಧಿಕಾರಿಗಳು- ವಿದ್ಯಾರ್ಥಿಗಳು- ಹೆತ್ತವರು ಅಭಿನಂದಿಸಿದ್ದಾರೆ . ಮನೆ- ಮನೆಗೆ ಭರತನಾಟ್ಯ ಮತ್ತು ವಿಶಿಷ್ಟವಾದ ನಾಟ್ಯಾಯನ ಕಾರ್ಯಕ್ರಮಗಳನ್ನು ದೇಶ – ವಿದೇಶಗಳಲ್ಲಿ ಪ್ರದರ್ಶನ ಮಾಡುತ್ತಿರುವ ಅಯನಾ ಮೈಸೂರು ವಿವಿ ಯಲ್ಲಿ ಆಂಗ್ಲ ಭಾಷೆಯ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಡಾ . ಮುಕಾಂಬಿಕಾ .ಜಿ. ಎಸ್ ಮತ್ತು ಶ್ರೀ ಪುತ್ತಿಗೆ ಮಠದ ಕೋಟಿ ಗೀತಾ ಲೇಖನ ಯಜ್ಞ ಪ್ರಚಾರಕ
ಕೆ. ವಿ. ರಮಣ್ ಆಚಾರ್ಯ ದಂಪತಿಯ ಪುತ್ರಿಯಾಗಿದ್ದಾರೆ .

 

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

8 hours ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

8 hours ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

10 hours ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

1 day ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

1 day ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

1 day ago