ಕರಾವಳಿ

ದೂರದರ್ಶನ ಕಲಾವಿದೆಯಾಗಿ ಅಯನಾ. ವಿ. ರಮಣ್ ಆಯ್ಕೆ

ಬಹುಮುಖ ಪ್ರತಿಭೆಯ ಹೆಸರಾಂತ ಕಲಾವಿದೆ ಅಯನಾ. ವಿ. ರಮಣ್ ಮೂಡುಬಿದಿರೆ, ದೂರದರ್ಶನ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ .
ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿ ಶೇಖರ್ ಮಾರ್ಗದರ್ಶನದಲ್ಲಿ , ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಎದುರಿಸಿದ್ದ ಅವರು ” ಬಿ ” ಗ್ರೇಡ್ ಮಾನ್ಯತೆ ಪಡೆದಿದ್ದಾರೆ .

ಬೆಂಗಳೂರಿನ ಕರ್ನಾಟಕ ಕಲಾಶ್ರೀ ವಿದ್ವಾನ್ ಸತ್ಯನಾರಾಯಣ ರಾಜು ಅವರಲ್ಲಿ ವಿಶೇಷ ತರಬೇತಿ ಪಡೆಯುತ್ತಿರುವ ಅಯನಾ ಸಾಧನೆಗೆ ಉಡುಪಿ ಶ್ರೀ ಕೃಷ್ಣ ಮಠ – ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇ0ದ್ರ ತೀರ್ಥ ಶ್ರೀಪಾದರು ಆಶೀರ್ವಾದ ಪೂರ್ವಕವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು , ಅಯನಾ .ವಿ. ರಮಣ್ ನಡೆಸುವ ನೃತ್ಯ ಸಂಸ್ಥೆ “ನಾಟ್ಯಾಯನ ಮೂಡುಬಿದಿರೆ ” ಮತ್ತು ನೃತ್ಯ ಗುರುವಾಗಿರುವ
“ರಂಗಭಾರತಿ ಕಲಾಮಂದಿರಮ್”, ಕುಶಾಲನಗರ , ಸಂಸ್ಥೆಗಳ ಪದಾಧಿಕಾರಿಗಳು- ವಿದ್ಯಾರ್ಥಿಗಳು- ಹೆತ್ತವರು ಅಭಿನಂದಿಸಿದ್ದಾರೆ . ಮನೆ- ಮನೆಗೆ ಭರತನಾಟ್ಯ ಮತ್ತು ವಿಶಿಷ್ಟವಾದ ನಾಟ್ಯಾಯನ ಕಾರ್ಯಕ್ರಮಗಳನ್ನು ದೇಶ – ವಿದೇಶಗಳಲ್ಲಿ ಪ್ರದರ್ಶನ ಮಾಡುತ್ತಿರುವ ಅಯನಾ ಮೈಸೂರು ವಿವಿ ಯಲ್ಲಿ ಆಂಗ್ಲ ಭಾಷೆಯ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಡಾ . ಮುಕಾಂಬಿಕಾ .ಜಿ. ಎಸ್ ಮತ್ತು ಶ್ರೀ ಪುತ್ತಿಗೆ ಮಠದ ಕೋಟಿ ಗೀತಾ ಲೇಖನ ಯಜ್ಞ ಪ್ರಚಾರಕ
ಕೆ. ವಿ. ರಮಣ್ ಆಚಾರ್ಯ ದಂಪತಿಯ ಪುತ್ರಿಯಾಗಿದ್ದಾರೆ .

 

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

1 day ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

2 days ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

2 days ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

6 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

7 days ago