ಬಹುಮುಖ ಪ್ರತಿಭೆಯ ಹೆಸರಾಂತ ಕಲಾವಿದೆ ಅಯನಾ. ವಿ. ರಮಣ್ ಮೂಡುಬಿದಿರೆ, ದೂರದರ್ಶನ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ .
ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿ ಶೇಖರ್ ಮಾರ್ಗದರ್ಶನದಲ್ಲಿ , ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಎದುರಿಸಿದ್ದ ಅವರು ” ಬಿ ” ಗ್ರೇಡ್ ಮಾನ್ಯತೆ ಪಡೆದಿದ್ದಾರೆ .
ಬೆಂಗಳೂರಿನ ಕರ್ನಾಟಕ ಕಲಾಶ್ರೀ ವಿದ್ವಾನ್ ಸತ್ಯನಾರಾಯಣ ರಾಜು ಅವರಲ್ಲಿ ವಿಶೇಷ ತರಬೇತಿ ಪಡೆಯುತ್ತಿರುವ ಅಯನಾ ಸಾಧನೆಗೆ ಉಡುಪಿ ಶ್ರೀ ಕೃಷ್ಣ ಮಠ – ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇ0ದ್ರ ತೀರ್ಥ ಶ್ರೀಪಾದರು ಆಶೀರ್ವಾದ ಪೂರ್ವಕವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು , ಅಯನಾ .ವಿ. ರಮಣ್ ನಡೆಸುವ ನೃತ್ಯ ಸಂಸ್ಥೆ “ನಾಟ್ಯಾಯನ ಮೂಡುಬಿದಿರೆ ” ಮತ್ತು ನೃತ್ಯ ಗುರುವಾಗಿರುವ
“ರಂಗಭಾರತಿ ಕಲಾಮಂದಿರಮ್”, ಕುಶಾಲನಗರ , ಸಂಸ್ಥೆಗಳ ಪದಾಧಿಕಾರಿಗಳು- ವಿದ್ಯಾರ್ಥಿಗಳು- ಹೆತ್ತವರು ಅಭಿನಂದಿಸಿದ್ದಾರೆ . ಮನೆ- ಮನೆಗೆ ಭರತನಾಟ್ಯ ಮತ್ತು ವಿಶಿಷ್ಟವಾದ ನಾಟ್ಯಾಯನ ಕಾರ್ಯಕ್ರಮಗಳನ್ನು ದೇಶ – ವಿದೇಶಗಳಲ್ಲಿ ಪ್ರದರ್ಶನ ಮಾಡುತ್ತಿರುವ ಅಯನಾ ಮೈಸೂರು ವಿವಿ ಯಲ್ಲಿ ಆಂಗ್ಲ ಭಾಷೆಯ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಡಾ . ಮುಕಾಂಬಿಕಾ .ಜಿ. ಎಸ್ ಮತ್ತು ಶ್ರೀ ಪುತ್ತಿಗೆ ಮಠದ ಕೋಟಿ ಗೀತಾ ಲೇಖನ ಯಜ್ಞ ಪ್ರಚಾರಕ
ಕೆ. ವಿ. ರಮಣ್ ಆಚಾರ್ಯ ದಂಪತಿಯ ಪುತ್ರಿಯಾಗಿದ್ದಾರೆ .
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…