ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಶೋಚನೀಯ ರೀತಿಯಲ್ಲಿ ಜೀವನ ಸಾಗಿರುತ್ತಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ವಸತಿ, ನಿವೇಶನ, ಮಕ್ಕಳಿಗೆ ಶಿಕ್ಷಣ ಮುಂತಾದ ಎಲ್ಲಾ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಅಲೆವೂರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.
ಉಡುಪಿಯ ಪ್ರವಾಸಿ ಮಂದಿರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಜನಾಂಗದ ಮಕ್ಕಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಒಂದು ಕಡೆ ರಾಜ್ಯದ ಕೆಲವು ತಾಲೂಕಿನ ತಹಶೀಲ್ದಾರರು ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಆಗುವುದಿಲ್ಲ ಎನ್ನುತ್ತಾರೆ. ಇನ್ನೊಂದು ಕಡೆ ಈ ಜನಾಂಗದ ವಿದ್ಯಾರ್ಥಿಗಳ ಪ್ರವೇಶಾತಿ ಸಂದರ್ಭದಲ್ಲಿ ಮೊರಾರ್ಜಿ ವಸತಿ ಶಾಲೆಯ ಪ್ರಾಚಾರ್ಯರು ಅಲೆಮಾರಿ ಜನಾಂಗ ಎಂದು ನಮೂದಿಸಿರುವ ಜಾತಿ ಪ್ರಮಾಣ ಪತ್ರವನ್ನೇ ತರಬೇಕೆಂದು ದಾಖಲಾತಿಯನ್ನು ನಿರಾಕರಣೆ ಮಾಡುತ್ತಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರಕಾಶ್ ಎಂ.ಬೆಂಗಳೂರು, ಉಪಾಧ್ಯಕ್ಷರುಗಳಾದ ಅನಂತ ಕೃಷ್ಣ ಯಾದವ್, ಶಿವರಾಮ ರಘು ಬಳೇಗಾರ್, ಎಚ್.ಇ.ತೋಟಪ್ಪ ಶಿವಮೊಗ್ಗ, ಯುವ ಘಟಕದ ರಾಜ್ಯಾಧ್ಯಕ್ಷ ವೈ.ಕುಮಾರ್ ಮೈಸೂರು, ಉಡುಪಿ ಜಿಲ್ಲಾಧ್ಯಕ್ಷ ಕೃಷ್ಣಯ್ಯ ಜೋಗಿ, ಮಹಿಳಾ ಘಟಕದ ಅಧ್ಯಕ್ಷೆ ಅನುಪಮಾ ಜೋಗಿ, ಯುವ ಘಟಕದ ಜಿಲ್ಲಾಧ್ಯಕ್ಷ ರಾಜೇಶ್, ಜಿಲ್ಲಾ ಪ್ರಧಾನ ಸಂಚಾಲಕ ಕೇಶವ ಕೋಟೇಶ್ವರ, ಗೌರವಾಧ್ಯಕ್ಷ ಪುಟ್ಟಣ್ಣ ಯಾದವ್ ಉಪಸ್ಥಿತರಿದ್ದರು
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…