ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಶೋಚನೀಯ ರೀತಿಯಲ್ಲಿ ಜೀವನ ಸಾಗಿರುತ್ತಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ವಸತಿ, ನಿವೇಶನ, ಮಕ್ಕಳಿಗೆ ಶಿಕ್ಷಣ ಮುಂತಾದ ಎಲ್ಲಾ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಅಲೆವೂರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.
ಉಡುಪಿಯ ಪ್ರವಾಸಿ ಮಂದಿರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಜನಾಂಗದ ಮಕ್ಕಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಒಂದು ಕಡೆ ರಾಜ್ಯದ ಕೆಲವು ತಾಲೂಕಿನ ತಹಶೀಲ್ದಾರರು ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಆಗುವುದಿಲ್ಲ ಎನ್ನುತ್ತಾರೆ. ಇನ್ನೊಂದು ಕಡೆ ಈ ಜನಾಂಗದ ವಿದ್ಯಾರ್ಥಿಗಳ ಪ್ರವೇಶಾತಿ ಸಂದರ್ಭದಲ್ಲಿ ಮೊರಾರ್ಜಿ ವಸತಿ ಶಾಲೆಯ ಪ್ರಾಚಾರ್ಯರು ಅಲೆಮಾರಿ ಜನಾಂಗ ಎಂದು ನಮೂದಿಸಿರುವ ಜಾತಿ ಪ್ರಮಾಣ ಪತ್ರವನ್ನೇ ತರಬೇಕೆಂದು ದಾಖಲಾತಿಯನ್ನು ನಿರಾಕರಣೆ ಮಾಡುತ್ತಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರಕಾಶ್ ಎಂ.ಬೆಂಗಳೂರು, ಉಪಾಧ್ಯಕ್ಷರುಗಳಾದ ಅನಂತ ಕೃಷ್ಣ ಯಾದವ್, ಶಿವರಾಮ ರಘು ಬಳೇಗಾರ್, ಎಚ್.ಇ.ತೋಟಪ್ಪ ಶಿವಮೊಗ್ಗ, ಯುವ ಘಟಕದ ರಾಜ್ಯಾಧ್ಯಕ್ಷ ವೈ.ಕುಮಾರ್ ಮೈಸೂರು, ಉಡುಪಿ ಜಿಲ್ಲಾಧ್ಯಕ್ಷ ಕೃಷ್ಣಯ್ಯ ಜೋಗಿ, ಮಹಿಳಾ ಘಟಕದ ಅಧ್ಯಕ್ಷೆ ಅನುಪಮಾ ಜೋಗಿ, ಯುವ ಘಟಕದ ಜಿಲ್ಲಾಧ್ಯಕ್ಷ ರಾಜೇಶ್, ಜಿಲ್ಲಾ ಪ್ರಧಾನ ಸಂಚಾಲಕ ಕೇಶವ ಕೋಟೇಶ್ವರ, ಗೌರವಾಧ್ಯಕ್ಷ ಪುಟ್ಟಣ್ಣ ಯಾದವ್ ಉಪಸ್ಥಿತರಿದ್ದರು
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…