ಕಿನ್ನಿಗೋಳಿ: ಶ್ರೀ ನಂದಿಕೇಶ್ವರ ನಾಟಕ ಸಂಘ ಮಂಗಳೂರು ಇದರ ಸಂಯೋಜನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದೊಂದಿಗೆ ದಿ.ಪಿಬಿ ರೈ ಬೆಳ್ಳಾರೆ ಇವರ ಸವಿನೆನಪಿನಲ್ಲಿ ಮುದುಕನ ಮದುವೆ ಎಂಬ ಹಾಸ್ಯ ನಾಟಕ ಪ್ರದರ್ಶನ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಆಶೀರ್ವಚನದ ನುಡಿಗಳನ್ನಾಡಿದ ಕಟೀಲು ಕ್ಷೇತ್ರದ ಅನುವಂಶಿಕ ಮೊಕ್ತೇಸರ ಲಕ್ಷ್ಮಿನಾರಾಯಣ ಅಸ್ರಣ್ಣ ಅವರು, “ಇದೊಂದು ವಿಶಿಷ್ಟ ಕಾರ್ಯಕ್ರಮ. ನಂದಿಕೇಶ್ವರ ನಾಟಕ ತಂಡದಲ್ಲಿ ಸಿನಿಮಾ ಕ್ಷೇತ್ರದ ಅನೇಕ ಹಿರಿಯ ಕಲಾವಿದರು ಬಣ್ಣ ಹಚ್ಚಿದ್ದಾರೆ. ಸಾವಿರಾರು ಪ್ರದರ್ಶನ ಕಂಡ ಈ ನಾಟಕಕ್ಕೆ ಇಂದಿಗೂ ಜನರ ಬೆಂಬಲ ಸಿಗುತ್ತಿರುವುದು ನೋಡಿದರೆ ಖುಷಿಯಾಗುತ್ತದೆ. ಮುಂದೆಯೂ ಈ ತಂಡದ ಮೂಲಕ ಇನ್ನಷ್ಟು ನಾಟಕ ಪ್ರದರ್ಶನಗಳು ನಡೆಯಲಿ” ಎಂದರು.ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಮಾತನಾಡಿ, “ನಾಟಕಗಳಿಗೆ ಮತ್ತು ಕಲಾವಿದರಿಗೆ ಜನರ ಪ್ರೋತ್ಸಾಹ ಬೇಕು. ಕಳೆದ 40 ವರ್ಷಗಳಿಂದ ಶ್ರೀ ನಂದಿಕೇಶ್ವರ ನಾಟಕ ಸಂಘ ಜನರನ್ನು ರಂಜಿಸುವ ಮೂಲಕ ಶ್ಲಾಘನೀಯ ಕಾರ್ಯ ಮಾಡುತ್ತಿದೆ. ಅವರಿಗೆ ಶುಭವಾಗಲಿ“ ಎಂದರು.
ವೇದಿಕೆಯಲ್ಲಿ ಯುಗಪುರುಷ ಪತ್ರಿಕೆ ಸಂಪಾದಕ ಭುವನಾಭಿರಾಮ ಉಡುಪ, ನಟ ಸುಂದರ ರೈ ಮಂದಾರ, ರಾಜ್ ಸಂಪಾಜೆ, ಸಾಯಿನಾಥ್ ಮಾಸ್ಟರ್, ಶಿಲ್ಪಾ ಗೊಂಬೆ ಬಳಗದ ರಮೇಶ್ ಕಲ್ಲಡ್ಕ, ನಾಗರಾಜ್ ಆಚಾರ್ಯ, ತುಳುವೆ ಪ್ರಕಾಶ್, ವಿಕ್ರಂ ಜಾದೂಗಾರ್, ಉದ್ಯಮಿ ಗಣೇಶ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಕಲಾವಿದ ರಾಜ್ ಸಂಪಾಜೆ, ಭುವನಾಭಿರಾಮ ಉಡುಪ, ದೀಪಕ್ ರೈ ಪಾಣಾಜೆ ಅವರನ್ನು ಅತಿಥಿಗಳು ಸನ್ಮಾನಿಸಿದರು.ಪತ್ರಕರ್ತ ಶರತ್ ಶೆಟ್ಟಿ ಕಿನ್ನಿಗೋಳಿ ಕಾರ್ಯಕ್ರಮ ನಿರೂಪಿಸಿದರು. ಸಾಯಿನಾಥ್ ಪ್ರಾಸ್ತಾವಿಕ ಮಾತಾಡಿದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…