ಜನ ಮನದ ನಾಡಿ ಮಿಡಿತ

Advertisement

ನರಿಂಗಾನ : ಅಳಿ ಮಳೆಗೆ ಧರೆಗುರುಳಿದ ಮರಗಳ ರಾಶಿ, ಹಲವು ಮನೆಗಳಿಗೆ ಹಾನಿ, ಸ್ಪೀಕರ್ ಯು.ಟಿ. ಖಾದರ್ ಸ್ಥಳಕ್ಕೆ ಭೇಟಿ, ಪರಿಶೀಲನೆ

ಕಳೆದ ಕೆಲವು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆ,  ಬೀಸಿದ ಬಲವಾದ ಗಾಳಿಗೆ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಮೋರ್ಲಹಿತ್ತಿಲು, ಕೊರಕಟ್ಟ, ಸರ್ಕುಡೇಲು ವಿವಿಧ ಭಾಗದಲ್ಲಿ ದೊಡ್ಡ ಪ್ರಮಾಣದ ಹಾನಿಯಾಗಿದೆ.

 

ರಾತ್ರಿ ಸುಮಾರು 9.00ಗಂಟೆಗೆ ಬೀಸಿದ ಗಾಳಿಗೆ ಕೊರಕಟ್ಟ ಜಾರಪ್ಪ ಪೂಜಾರಿ, ಸರ್ಕುಡೇಲು ರಾಮ್ ದಾಸ್ ಪೂಜಾರಿ, ಚಂದ್ರಹಾಸ್ ಪೂಜಾರಿ ಸರ್ಕುಡೇಲು, ಕೊರಕಟ್ಟ ಆಲಿಕುಂಞಿ, ಮೋರ್ಲಹಿತ್ತಿಲು ಅಬ್ಬಾಸ್, ಮೋರ್ಲಹಿತ್ತಿಲು ಹನೀಫ್, ಮೋರ್ಲ ಕಂಬಳಕೋಡಿ ಅನ್ಸಾರ್, ಕೊರಕಟ್ಟ ಶೇಖಬ್ಬ, ಮಹಮ್ಮದ್ ಕೊರಕಟ್ಟ ಹಾಗೂ ಪೊಟ್ಟೊಳಿಕೆಯ ಒಂದು ಮನೆಗೆ ಹಾಗೂ ಶಾಂತಿಪಳಿಕೆ ದಿ. ಗುಲಾಬಿ ಅವರ ಪುತ್ರ ಚಂದ್ರಹಾಸ್ ಶಾಂತಿಪಳಿಕೆ ಅವರ ಮನೆಗೆ ಭಾರೀ ಪ್ರಮಾಣದ ಹಾನಿಯಾಗಿದ್ದು ಲಕ್ಷಾಂತರ ರೂ. ನಷ್ಟವಾಗಿದೆ. ರಾತ್ರಿಯ ಗಾಳಿ ಮಳೆಗೆ ಈ ರೀತಿ ಅವಾಂತರ ನಡೆದಿದ್ದರೂ ಅದೃಷ್ಟವಶಾತ್ ಗಾಯ ನೋವಾದ ಘಟನೆ ಸಂಭವಿಸಿಲ್ಲ.
ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಕ್ಷೇತ್ರದ ಶಾಸಕ, ಕರ್ನಾಟಕ ವಿಧಾನಸಭಾ ಅಧ್ಯಕ್ಷರ ಯು.ಟಿ ಖಾದರ್ ಅವರು ಭೇಟಿ ನೀಡಿ ಅಗತ್ಯ ಕ್ರಮಕ್ಕೆ ತಹಶೀಲ್ದಾರ್ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿ ವಿಶೇಷ ಸಭೆ ಕರೆದರು.

ರಸ್ತೆಯುದ್ದಕ್ಕೂ ಧರೆಗುರುಳಿದ್ದ ಮರಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದು ಸ್ಥಳೀಯರು, ಪಂಚಾಯಿತಿ ಪ್ರತಿನಿಧಿಗಳು ಸಹಕರಿಸಿದರು.ಉಳ್ಳಾಲ್ ತಾಲೂಕು ತಹಶೀಲ್ದಾರ್ ಪುಟ್ಟರಾಜು ಮಾಹಿತಿ ಪಡೆದರು.ನರಿಂಗಾನ‌ ಗ್ರಾಮ ಪಂಚಾಯಿತಿ ಅಧ್ಯಕ್ಷ ನವಾಝ್ ನರಿಂಗಾನ, ಪಿಡಿಒ ರಜನಿ ಡಿ. ಗಟ್ಟಿ, ಸದಸ್ಯರುಗಳಾದ ಶೇಖಬ್ಬ ನಿಡ್ಮಾಡ್, ಸಲೀಂ ಪೊಟ್ಟೊಳಿಕೆ, ಮುರಲೀಧರ ಶೆಟ್ಟಿ ಮೋರ್ಲ, ಸುಂದರ ಪೂಜರಿ ಕೋಡಿಮಜಲು ಮೋರ್ಲ, ಲತೀಫ್ ಕಾಪಿಕಾಡ್ ಶಾಸಕರ ಜೊತೆ ಚರ್ಚಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!