ಮುಲ್ಕಿ: ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಕಚೇರಿ ಹಾಗೂ ಮುಲ್ಕಿ ಸರಕಾರಿ ಪದವಿಪೂರ್ವ ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ಮತ್ತು ಅಕ್ರಮ ಸಾಗಾಣಿಕೆ ತಡೆಗಟ್ಟುವಿಕೆ ದಿನಾಚರಣೆ ಹಾಗೂ ಮಲೇರಿಯಾ ಮತ್ತು ಡೆಂಗ್ಯೂ ಬಗ್ಗೆ ಮಾಹಿತಿ ಕಾರ್ಯಾಗಾರ 2024 ಹಾಗೂ ಕಾಲೇಜಿನ 2024-2 5ನೇ ಸಾಲಿನ ಎನ್.ಎಸ್.ಎಸ್.ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಕಾರ್ನಾಡ್ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಾಗಾರವನ್ನು ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಇಂದು ಎಂ. ಉದ್ಘಾಟಿಸಿ ಮಾತನಾಡಿ ಪರಿಸರ ಸ್ವಚ್ಛವಾಗಿ ಇಡುವುದರ ಜೊತೆಗೆ ಮಲೇರಿಯಾ, ಡೆಂಗ್ಯೂ ಸಹಿತ ಮಾರಕ ರೋಗಗಳ ನಿರ್ಮೂಲನೆಗೆ ಜನರ ಸಹಕಾರ ಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮುಲ್ಕಿ ನ. ಪಂ ಸದಸ್ಯ ಪುತ್ತು ಬಾವ, ಕಾಲೇಜು ಸುಧಾರಣಾ ಮಂಡಳಿಯ ಅಶೋಕ್ ಕುಮಾರ್ ಶೆಟ್ಟಿ, ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೃಷ್ಣ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳೆಪಾಡಿ,ಮುಕ್ಕ ಶ್ರೀನಿವಾಸ್ ಮೆಡಿಕಲ್ ಕಾಲೇಜಿನ ಡಾ. ಮಿಥುನ್ ಕುಮಾರ್, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಡಾ. ರೇಖಾ ಬಿ ಎಸ್ ಮತ್ತಿತರರು ಉಪಸ್ಥಿತರಿದ್ದರು. ಎಲಿಯಮ್ಮ ಸ್ವಾಗತಿಸಿದರು, ಉಪನ್ಯಾಸಕರಾದ ರಮಾನಂದ ಧನ್ಯವಾದ ಅರ್ಪಿಸಿದರು, ಲಿಡಿಯ ನಿರೂಪಿಸಿದರು.
ಬಳಿಕ ಸಂಪನ್ಮೂಲ ವ್ಯಕ್ತಿಯಾಗಿ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಿ ಆರ್ ಪ್ರದೀಪ್ ಕುಮಾರ್ ಮಲೇರಿಯ ಸಹಿತ ಮಾರಕ ರೋಗಗಳ ನಿರ್ಮೂಲನೆ ಹಾಗೂ ಸುರಕ್ಷತೆ ಬಗ್ಗೆಮಾಹಿತಿ ನೀಡಿದರು.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…