ಮಂಗಳೂರು: ಮಂಗಳೂರು ನಗರ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ತುವಿನಲ್ಲಿ 2 ದಿನಗಳ ಹಿಂದೆ ಮಾಲೀಕನಿಂದಲೇ ಕೊಲೆಯಾದ ಕಾರ್ಮಿಕ ಗಜ್ಜಾನ್ ಯಾನೆ ಜಗ್ಗು ಎಂಬಾತನ ವಿಳಾಸ ಪತ್ತೆಗೆ ಪಾಂಡೇಶ್ವರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಉತ್ತರ ಭಾರತ ಮೂಲದವನು ಎನ್ನಲಾದ ಈತನ ವಾರಸುದಾರರು ಯಾರು ಎಂಬುದು ಇದುವರೆಗೆ ಗೊತ್ತಾಗಿಲ್ಲ. ಈತನನ್ನು ನಗರದಲ್ಲಿ ಗಜ್ವಾನ್ ಎಂದು ಕರೆಯಲಾಗುತ್ತಿತ್ತು. ಆದರೆ ಈತನ ನಿಜ ಹೆಸರೇನು ಎಂಬುದು ಕೂಡ ಯಾರಿಗೂ ತಿಳಿದಿಲ್ಲ.
ಕೊಲೆಯಾದ ಗಜ್ಜಾನ್ ಕಳೆದ ಮೂರು ವರ್ಷಗಳಿಂದ ಆರೋಪಿ ತೌಸಿಫ್ ಹುಸೇನ್ ಕೈ ಕೆಳಗೆ ಕೆಲಸ ಮಾಡುತಿದ್ದರು. ೨ ದಿನಗಳ ಹಿಂದೆಯಷ್ಟೇ ಕೊಲೆಯಾದ ಜಗ್ಗು ಸುಮಾರು 5.5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ವ ದೃಢಕಾಯ ಶರೀರ, ಕಪ್ಪು ತಲೆ ಕೂದಲು, ಕುರುಚಲು ಗಡ್ಡ ಹೊಂದಿದ್ದರು.
ಇವರ ಸಂಬಂಧಿಕರು ಅಥವಾ ಪರಿಚಯಸ್ಥರಿದ್ದರೆ ಪಾಂಡೇಶ್ವರ ಠಾಣೆಯನ್ನು (0824-2220518) ಸಂಪರ್ಕಿಸುವಂತೆ
ಪೊಲೀಸರು ಮನವಿ ಮಾಡಿದ್ದಾರೆ.
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ…
ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು…
ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಬಂಟ್ವಾಳ ನಂ.1 ಮತ್ತು ನಂ 2 ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಿ.ಸಿ.ರೋಡ್ನಲ್ಲಿರುವ…