ಮಂಗಳೂರು: ಮಂಗಳೂರು ನಗರ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ತುವಿನಲ್ಲಿ 2 ದಿನಗಳ ಹಿಂದೆ ಮಾಲೀಕನಿಂದಲೇ ಕೊಲೆಯಾದ ಕಾರ್ಮಿಕ ಗಜ್ಜಾನ್ ಯಾನೆ ಜಗ್ಗು ಎಂಬಾತನ ವಿಳಾಸ ಪತ್ತೆಗೆ ಪಾಂಡೇಶ್ವರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಉತ್ತರ ಭಾರತ ಮೂಲದವನು ಎನ್ನಲಾದ ಈತನ ವಾರಸುದಾರರು ಯಾರು ಎಂಬುದು ಇದುವರೆಗೆ ಗೊತ್ತಾಗಿಲ್ಲ. ಈತನನ್ನು ನಗರದಲ್ಲಿ ಗಜ್ವಾನ್ ಎಂದು ಕರೆಯಲಾಗುತ್ತಿತ್ತು. ಆದರೆ ಈತನ ನಿಜ ಹೆಸರೇನು ಎಂಬುದು ಕೂಡ ಯಾರಿಗೂ ತಿಳಿದಿಲ್ಲ.
ಕೊಲೆಯಾದ ಗಜ್ಜಾನ್ ಕಳೆದ ಮೂರು ವರ್ಷಗಳಿಂದ ಆರೋಪಿ ತೌಸಿಫ್ ಹುಸೇನ್ ಕೈ ಕೆಳಗೆ ಕೆಲಸ ಮಾಡುತಿದ್ದರು. ೨ ದಿನಗಳ ಹಿಂದೆಯಷ್ಟೇ ಕೊಲೆಯಾದ ಜಗ್ಗು ಸುಮಾರು 5.5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ವ ದೃಢಕಾಯ ಶರೀರ, ಕಪ್ಪು ತಲೆ ಕೂದಲು, ಕುರುಚಲು ಗಡ್ಡ ಹೊಂದಿದ್ದರು.
ಇವರ ಸಂಬಂಧಿಕರು ಅಥವಾ ಪರಿಚಯಸ್ಥರಿದ್ದರೆ ಪಾಂಡೇಶ್ವರ ಠಾಣೆಯನ್ನು (0824-2220518) ಸಂಪರ್ಕಿಸುವಂತೆ
ಪೊಲೀಸರು ಮನವಿ ಮಾಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…