ಜನ ಮನದ ನಾಡಿ ಮಿಡಿತ

Advertisement

ರಸ್ತೆ ಸಮಸ್ಯೆಗೆ ಸ್ಪಂದಿಸಿದ ಶಿರ್ತಾಡಿ ಗ್ರಾಮ ಪಂಚಾಯತ್, ಸದಸ್ಯರಿಗೆ ಧನ್ಯವಾದ ತಿಳಿಸಿದ ಸ್ಥಳೀಯರು

ದಕ್ಷಿಣ ಕನ್ನಡ : ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಿರ್ತಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡು ಕೋಣಾಜೆ ವ್ಯಾಪ್ತಿಯ ಕುಕ್ಕುದ ಕಟ್ಟೆ ಸಮೀಪದ ಕುಂಟಲ ಹಾಗೂ ಇತರಡೆಗೆ ಸಂಪರ್ಕಿಸುವ ರಸ್ತೆಯನ್ನು ಸ್ಥಳೀಯ ಪಂಚಾಯತ್ ಸದಸ್ಯರು ಮುತುವರ್ಜಿ ವಹಿಸಿ ಸಂಚಾರ ಯೋಗ್ಯ ರಸ್ತೆಯನ್ನಾಗಿ ಮಾಡಿದ್ದು ಜನರು ಸಂತೋಷ ವ್ಯಕ್ತಪಡಿಸಿದ್ದಾರೆ, ಹಾಗೂ ಸಂಬಂಧ ಪಟ್ಟವರಿಗೆ ಧನ್ಯವಾದಗಳು ತಿಳಿಸಿದ್ದಾರೆ.


ಇತ್ತೀಚೆಗೆ ಸುದ್ದಿ ಆಗಿದ್ದ ರಸ್ತೆಯ ದುಷ್ಥಿತಿಯನ್ನು ಮನಗಂಡು, ಸಮಸ್ಯೆಯ ಗಂಭೀರತೆಯನ್ನು ಅರಿತು ರಸ್ತೆ ಬದಿಯ ಚರಂಡಿ ಸರಿಪಡಿಸಿ, ಕೆಸರು ತುಂಬಿದ ರಸ್ತೆಗೆ ಜೆಲ್ಲಿ ಹಾಸಿ ಭಾರಿ ಮಳೆ ಮದ್ಯೆಯೇ ಸರಿಪಡಿಸಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಅಲ್ಲದೆ ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಗಾಳಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವೆಡೆ ಸಮಸ್ಯೆಯಾಗಿದ್ದು, ಹಲವು ವಿದ್ಯುತ್ ಕಂಬಗಳು ಉರುಳಿದ್ದು, ರಸ್ತೆಗೆ ಮರ ಉರುಳಿದ್ದು, ಹೆಚ್ಚಿನ ಕಡೆಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಸಹಕಾರದೊಂದಿಗೆ, ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿದ್ದು, ನಾಗರಿಕರು ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!