ದಕ್ಷಿಣ ಕನ್ನಡ : ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಿರ್ತಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡು ಕೋಣಾಜೆ ವ್ಯಾಪ್ತಿಯ ಕುಕ್ಕುದ ಕಟ್ಟೆ ಸಮೀಪದ ಕುಂಟಲ ಹಾಗೂ ಇತರಡೆಗೆ ಸಂಪರ್ಕಿಸುವ ರಸ್ತೆಯನ್ನು ಸ್ಥಳೀಯ ಪಂಚಾಯತ್ ಸದಸ್ಯರು ಮುತುವರ್ಜಿ ವಹಿಸಿ ಸಂಚಾರ ಯೋಗ್ಯ ರಸ್ತೆಯನ್ನಾಗಿ ಮಾಡಿದ್ದು ಜನರು ಸಂತೋಷ ವ್ಯಕ್ತಪಡಿಸಿದ್ದಾರೆ, ಹಾಗೂ ಸಂಬಂಧ ಪಟ್ಟವರಿಗೆ ಧನ್ಯವಾದಗಳು ತಿಳಿಸಿದ್ದಾರೆ.
ಇತ್ತೀಚೆಗೆ ಸುದ್ದಿ ಆಗಿದ್ದ ರಸ್ತೆಯ ದುಷ್ಥಿತಿಯನ್ನು ಮನಗಂಡು, ಸಮಸ್ಯೆಯ ಗಂಭೀರತೆಯನ್ನು ಅರಿತು ರಸ್ತೆ ಬದಿಯ ಚರಂಡಿ ಸರಿಪಡಿಸಿ, ಕೆಸರು ತುಂಬಿದ ರಸ್ತೆಗೆ ಜೆಲ್ಲಿ ಹಾಸಿ ಭಾರಿ ಮಳೆ ಮದ್ಯೆಯೇ ಸರಿಪಡಿಸಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಅಲ್ಲದೆ ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಗಾಳಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವೆಡೆ ಸಮಸ್ಯೆಯಾಗಿದ್ದು, ಹಲವು ವಿದ್ಯುತ್ ಕಂಬಗಳು ಉರುಳಿದ್ದು, ರಸ್ತೆಗೆ ಮರ ಉರುಳಿದ್ದು, ಹೆಚ್ಚಿನ ಕಡೆಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಸಹಕಾರದೊಂದಿಗೆ, ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿದ್ದು, ನಾಗರಿಕರು ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…