ಮುಲ್ಕಿ ಇಲ್ಲಿಗೆ ಸಮೀಪದ ಮಾನಂಪಾಡಿ ಬಾಳೆಹಿತ್ಲು ನಿವಾಸಿ ರಂಗ ಕೋಟ್ಯಾನ್(80) ಅನಾರೋಗ್ಯದಿಂದ ಶನಿವಾರ ಬೆಳಗ್ಗೆ ನಿಧನರಾದರು.
ಅವರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅವರು ಮುಲ್ಕಿ ಪ್ರತಿಷ್ಠಿತ ವಿಜಯ ಕಾಲೇಜಿನಲ್ಲಿ ಸಿಬ್ಬಂದಿಯಾಗಿ ಸುಮಾರು 25 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ, ಮುಲ್ಕಿ ಹಿಂದೂ ಯುವ ಸೇನೆ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕೋಟಕೇರಿ ನವದುರ್ಗ ಯುವಕ ವೃಂದ, ಮುಲ್ಕಿ ಲಯನ್ಸ್ ಕ್ಲಬ್ ಸಹಿತ ವಿವಿಧ ಸೇವಾ ಸಂಸ್ಥೆಗಳ ಗೌರವ ಸಲಹೆಗಾರರಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.
ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು,ಮಾಜೀ ಧಾರ್ಮಿಕ ಪರಿಷತ್ ಸದಸ್ಯ ಗಿರಿ ಪ್ರಕಾಶ್ ತಂತ್ರಿ ಪೊಳಲಿ,ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಡಾ. ರಾಜಶೇಖರ್ ಕೋಟ್ಯಾನ್,ಮುಲ್ಕಿ ನಗರ ಪಂಚಾಯತ್ ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಸುಭಾಷ್ ಶೆಟ್ಟಿ, ಸದಸ್ಯರಾದ ಸತೀಶ್ ಅಂಚನ್,ಪುತ್ತು ಬಾವ, ಹರ್ಷರಾಜ ಶೆಟ್ಟಿ, ಬಾಲಚಂದ್ರ ಕಾಮತ್,ಮಾಜೀ ಸದಸ್ಯ ಉಮೇಶ್ ಮಾನಂಪಾಡಿ,
ಮುಖ್ಯಾಧಿಕಾರಿ ಇಂದು ಎಂ., ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ರಾಲ್ಫೀ ಡಿಕೋಸ್ಟ,ಮಾಜೀ ಅಧ್ಯಕ್ಷೆ ಶೀತಲ್ ಸುಶೀಲ್, ವಿಜಯಕುಮಾರ್ ಕುಬೆವೂರು, ಲ.ದೇವಪ್ರಸಾದ್ ಪುನರೂರು, ಧನಂಜಯ ಮಟ್ಟು,ಉದಯ ಅಮೀನ್ ಮಟ್ಟು, ಹಳೆಯಂಗಡಿ ಪಿಸಿಎಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್ ಕೊಳುವೈಲು,ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷರಾದ ಗೋಪಿನಾಥ ಪಡಂಗ, ರಮೇಶ್ ಅಮೀನ್ ಕೊಕ್ಕರಕಲ್,ಡಾ.ಹರಿಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಮುಲ್ಕಿ ಹಿಂದೂ ಯುವ ಸೇನೆಯ ಅಧ್ಯಕ್ಷ ದಿನೇಶ್ ಕೋಲ್ನಾಡ್, ಪದಾಧಿಕಾರಿಗಳಾದ ವಿನೋದ್ ಸಾಲ್ಯಾನ್ ಬೆಳ್ಳಾಯರು, ಜೀವನ್ ಪೂಜಾರಿ ಕೊಲ್ನಾಡು, ಶಂಕರ್ ಪಡಂಗ ,ಬಿರುವೆರ್ ಕುಡ್ಲ, ಮುಲ್ಕಿ ಘಟಕದ ಅಧ್ಯಕ್ಷ ಕಿಶೋರ್ ಸಾಲ್ಯಾನ್, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ,
ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಗೌತಮ್ ಜೈನ್ ಮುಲ್ಕಿ ಅರಮನೆ,ಮುಲ್ಕಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಅಧ್ಯಕ್ಷ ವೆಂಕಟೇಶ ಹೆಬ್ಬಾರ್,ವಾಮನ್ ಕೋಟ್ಯಾನ್ ನಡಿಕುದ್ರು,ಮುಲ್ಕಿ ರೋಟರಿ ಕ್ಲಬ್ ಮಾಜೀ ಅಧ್ಯಕ್ಷ ಶಿವರಾಮ್ ಜಿ ಅಮೀನ್, ಉದಯಕುಮಾರ್ ಶೆಟ್ಟಿ ಆಧಿಧನ್, ಸಾಮಾಜಿಕ ಕಾರ್ಯಕರ್ತ ಶರತ್ ಕಾರ್ನಾಡ್, ಧರ್ಮಾನಂದ ಶೆಟ್ಟಿಗಾರ್ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



