ಜನ ಮನದ ನಾಡಿ ಮಿಡಿತ

Advertisement

ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಹಾನಿಗೀಡಾದ ಮತ್ತು ನೆರೆಗೆ ನೇತ್ರಾವತಿ ನದಿ ತೀರದ ತಗ್ಗು ಪ್ರದೇಶಗಳು ಜಲಾವೃತ…!

ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಹಾನಿಗೀಡಾದ ಮತ್ತು ನೆರೆಗೆ ನೇತ್ರಾವತಿ ನದಿ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡ ಮನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬೇಟಿ ನೀಡಿ, ಸಂತ್ರಸ್ತರ ಸಮಸ್ಯೆ ಆಲಿಸಿದ್ದಾರೆ.

ಬಳಿಕ ಜಿಲ್ಲಾಧಿಕಾರಿ ಅವರಿಂದ ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡ್ರು. ಮಳೆಗೆ ಗುಡ್ಡ ಜರಿತವಾಗಿರುವ ಗೂಡಿನ ಬಳಿ ನೆರೆ ನೀರು ನುಗ್ಗಿ ಸಂತ್ರಸ್ತರಾದ ಆಲಡ್ಕ ಮತ್ತು ನಾವೂರ ಭಾಗದ ಜನರ ಸಮಸ್ಯೆ ಆಲಿಸಿದ ಸಚಿವರು ಬಳಿಕ ಮಳೆಗೆ ಕೊಚ್ಚಿಹೋದ ಕಂಚಿಕಾರ್ ಪೇಟೆ ರಸ್ತೆ ಹಾಗೂ ಸರಪಾಡಿ ಭಾಗದಲ್ಲಿ ನಡೆದ ಹಾನಿಗಳ ಬಗ್ಗೆ ವೀಕ್ಷಣೆ ನಡೆಸಿದ್ರು. ಬಳಿಕ ಮಾಧ್ಯಮವರ ಜೊತೆ ಮಾತನಾಡಿದ ಸಚಿವರು, ನೆರೆಯಿಂದ ಮಳುಗಡೆಯಾದ ಆಲಡ್ಕದದ ಸಂತ್ರಸ್ತರಿಗೆ ಪರಿಹಾರ ನೀಡುವ ಕಾರ್ಯ ಆಗುತ್ತದೆ. ಸಂತ್ರಸ್ತರು ವಾಸವಾಗಿರುವ ಜಾಗದ ಮೇಲೆ ಕುಮ್ಕಿ ಜಾಗವೆಂದು ಕೇಸು ದಾಖಲಾಗಿದ್ದು,ಪ್ರಕರಣ ಜಿಲ್ಲಾಧಿಕಾರಿಯವರ ಮುಂದೆ ಇದೆ, ಆದಷ್ಟು ಬೇಗ ಜಾಗದ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಂಡು ಜಮೀನು ನೀಡುವಂತೆ ಜಿಲ್ಲಾಧಿಕಾರಿ ಅವರಿಗೆ ತಿಳಿಸಿದ್ದೇನೆ. ಸಮಸ್ಯೆ ಪರಿಹಾರವಾದರೆ ಮನೆ ಕಟ್ಟಲು ಸರಕಾರದ ಸಹಾಯಧನ ನೀಡಲಾಗುತ್ತದೆ. ಈ ವರ್ಷ ಸತತವಾಗಿ ಆರು ಬಾರಿ ಈ ಭಾಗಕ್ಕೆ ನೆರೆ ನೀರು ಬಂದಿದೆ ಎಂಬ ವಿಚಾರವನ್ನು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!