ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಹಾನಿಗೀಡಾದ ಮತ್ತು ನೆರೆಗೆ ನೇತ್ರಾವತಿ ನದಿ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡ ಮನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬೇಟಿ ನೀಡಿ, ಸಂತ್ರಸ್ತರ ಸಮಸ್ಯೆ ಆಲಿಸಿದ್ದಾರೆ.
ಬಳಿಕ ಜಿಲ್ಲಾಧಿಕಾರಿ ಅವರಿಂದ ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡ್ರು. ಮಳೆಗೆ ಗುಡ್ಡ ಜರಿತವಾಗಿರುವ ಗೂಡಿನ ಬಳಿ ನೆರೆ ನೀರು ನುಗ್ಗಿ ಸಂತ್ರಸ್ತರಾದ ಆಲಡ್ಕ ಮತ್ತು ನಾವೂರ ಭಾಗದ ಜನರ ಸಮಸ್ಯೆ ಆಲಿಸಿದ ಸಚಿವರು ಬಳಿಕ ಮಳೆಗೆ ಕೊಚ್ಚಿಹೋದ ಕಂಚಿಕಾರ್ ಪೇಟೆ ರಸ್ತೆ ಹಾಗೂ ಸರಪಾಡಿ ಭಾಗದಲ್ಲಿ ನಡೆದ ಹಾನಿಗಳ ಬಗ್ಗೆ ವೀಕ್ಷಣೆ ನಡೆಸಿದ್ರು. ಬಳಿಕ ಮಾಧ್ಯಮವರ ಜೊತೆ ಮಾತನಾಡಿದ ಸಚಿವರು, ನೆರೆಯಿಂದ ಮಳುಗಡೆಯಾದ ಆಲಡ್ಕದದ ಸಂತ್ರಸ್ತರಿಗೆ ಪರಿಹಾರ ನೀಡುವ ಕಾರ್ಯ ಆಗುತ್ತದೆ. ಸಂತ್ರಸ್ತರು ವಾಸವಾಗಿರುವ ಜಾಗದ ಮೇಲೆ ಕುಮ್ಕಿ ಜಾಗವೆಂದು ಕೇಸು ದಾಖಲಾಗಿದ್ದು,ಪ್ರಕರಣ ಜಿಲ್ಲಾಧಿಕಾರಿಯವರ ಮುಂದೆ ಇದೆ, ಆದಷ್ಟು ಬೇಗ ಜಾಗದ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಂಡು ಜಮೀನು ನೀಡುವಂತೆ ಜಿಲ್ಲಾಧಿಕಾರಿ ಅವರಿಗೆ ತಿಳಿಸಿದ್ದೇನೆ. ಸಮಸ್ಯೆ ಪರಿಹಾರವಾದರೆ ಮನೆ ಕಟ್ಟಲು ಸರಕಾರದ ಸಹಾಯಧನ ನೀಡಲಾಗುತ್ತದೆ. ಈ ವರ್ಷ ಸತತವಾಗಿ ಆರು ಬಾರಿ ಈ ಭಾಗಕ್ಕೆ ನೆರೆ ನೀರು ಬಂದಿದೆ ಎಂಬ ವಿಚಾರವನ್ನು ಅವರು ತಿಳಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…