ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಹಾನಿಗೀಡಾದ ಮತ್ತು ನೆರೆಗೆ ನೇತ್ರಾವತಿ ನದಿ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡ ಮನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬೇಟಿ ನೀಡಿ, ಸಂತ್ರಸ್ತರ ಸಮಸ್ಯೆ ಆಲಿಸಿದ್ದಾರೆ.
ಬಳಿಕ ಜಿಲ್ಲಾಧಿಕಾರಿ ಅವರಿಂದ ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡ್ರು. ಮಳೆಗೆ ಗುಡ್ಡ ಜರಿತವಾಗಿರುವ ಗೂಡಿನ ಬಳಿ ನೆರೆ ನೀರು ನುಗ್ಗಿ ಸಂತ್ರಸ್ತರಾದ ಆಲಡ್ಕ ಮತ್ತು ನಾವೂರ ಭಾಗದ ಜನರ ಸಮಸ್ಯೆ ಆಲಿಸಿದ ಸಚಿವರು ಬಳಿಕ ಮಳೆಗೆ ಕೊಚ್ಚಿಹೋದ ಕಂಚಿಕಾರ್ ಪೇಟೆ ರಸ್ತೆ ಹಾಗೂ ಸರಪಾಡಿ ಭಾಗದಲ್ಲಿ ನಡೆದ ಹಾನಿಗಳ ಬಗ್ಗೆ ವೀಕ್ಷಣೆ ನಡೆಸಿದ್ರು. ಬಳಿಕ ಮಾಧ್ಯಮವರ ಜೊತೆ ಮಾತನಾಡಿದ ಸಚಿವರು, ನೆರೆಯಿಂದ ಮಳುಗಡೆಯಾದ ಆಲಡ್ಕದದ ಸಂತ್ರಸ್ತರಿಗೆ ಪರಿಹಾರ ನೀಡುವ ಕಾರ್ಯ ಆಗುತ್ತದೆ. ಸಂತ್ರಸ್ತರು ವಾಸವಾಗಿರುವ ಜಾಗದ ಮೇಲೆ ಕುಮ್ಕಿ ಜಾಗವೆಂದು ಕೇಸು ದಾಖಲಾಗಿದ್ದು,ಪ್ರಕರಣ ಜಿಲ್ಲಾಧಿಕಾರಿಯವರ ಮುಂದೆ ಇದೆ, ಆದಷ್ಟು ಬೇಗ ಜಾಗದ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಂಡು ಜಮೀನು ನೀಡುವಂತೆ ಜಿಲ್ಲಾಧಿಕಾರಿ ಅವರಿಗೆ ತಿಳಿಸಿದ್ದೇನೆ. ಸಮಸ್ಯೆ ಪರಿಹಾರವಾದರೆ ಮನೆ ಕಟ್ಟಲು ಸರಕಾರದ ಸಹಾಯಧನ ನೀಡಲಾಗುತ್ತದೆ. ಈ ವರ್ಷ ಸತತವಾಗಿ ಆರು ಬಾರಿ ಈ ಭಾಗಕ್ಕೆ ನೆರೆ ನೀರು ಬಂದಿದೆ ಎಂಬ ವಿಚಾರವನ್ನು ಅವರು ತಿಳಿಸಿದ್ದಾರೆ.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…