ಬೆಳಗಾವಿ: ಘಟಪ್ರಭಾ ನದಿಯಲ್ಲಿ ಇಬ್ಬರು ಸಂಬಂಧಿಕರು ಕೊಚ್ಚಿ ಹೋಗಿರುವ ಘಟನೆ ಮೂಡಲಗಿ ತಾಲೂಕಿನ ಅವರಾದಿ ಬಳಿ ಇಂದು ಮಧ್ಯಾಹ್ನ ನಡೆದಿದೆ. ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬೈಕ್ ಬಿದ್ದಿದ್ದು, ಅವರಾದಿ ಗ್ರಾಮದ ಚನ್ನಪ್ಪ ಹರಿಜನ(30), ದುರ್ಗವ್ವ ಹರಿಜನ(25) ಕೊಚ್ಚಿಹೋದ ಸಂಬಂಧಿಗಳು ಎಂದು ಗುರುತಿಸಲಾಗಿದೆ.
ಇಬ್ಬರು ವ್ಯಕ್ತಿಗಳು ಅವರಾದಿ ಗ್ರಾಮದಿಂದ ಮಹಾಲಿಂಗಪುರ ಪಟ್ಟಣಕ್ಕೆ ಪ್ರಯಾಣ ಬೆಳೆಸಿದ್ದರು. ಆದರೆ, ಅವರ ಪ್ರಯಾಣದ ವೇಳೆ ಸೇತುವೆ ಮೇಲೆ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಉರುಳಿದೆ. ಬ್ರಿಡ್ಜ್ ಬಳಿ ಬೈಕ್ ಪತ್ತೆಯಾಗಿದ್ದು, ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿರುವ ಹಿನ್ನೆಲೆ ಘಟಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಹರಿವಾಗಿದ್ದು, ಸ್ಥಳಕ್ಕೆ ಎಸ್ಡಿಆರ್ಎಫ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ನದಿಯಲ್ಲಿ ಕೊಚ್ಚಿ ಹೋಗಿರುವ ಇಬ್ಬರಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…