ಆಕಾಶದಲ್ಲಿ ಜನರೇ ಇಲ್ಲದೆ ಹಾರಿ ಬಂದ ಪ್ಯಾರಾಚ್ಯೂಟ್ ಒಂದು ಗ್ರಾಮದ ಹೊಲವೊಂದರಲ್ಲಿ ಲ್ಯಾಂಡ್ ಆದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಭೀಮಾತೀರದ ಮರಗೂರು ಗ್ರಾಮದಲ್ಲಿ ನಡೆದಿದೆ.
ಸ್ಥಳಕ್ಕೆ ಓಡಿ ಬಂದು ಪರಿಶೀಲಿಸಿದ ಗ್ರಾಮಸ್ಥರು ಬಿದ್ದಿರುವ ಪ್ಯಾರಾಚ್ಯೂಟ್ನಲ್ಲಿದ್ದ ವಸ್ತುವನ್ನು ನೋಡಿ ಭಯಗೊಂಡಿದ್ದಾರೆ. ಬಾಕ್ಸ್ ಒಂದರಲ್ಲಿ ಜೋಡಿಸಲಾದ ಎಲೆಕ್ಟ್ರಾನಿಕ್ ಉಪಕರಣ ನೆಲಕ್ಕೆ ಬಿದ್ದು ಪುಡಿಯಾಗಿದ್ದರೂ ಅದರಲ್ಲಿ ಸಿಗ್ನಲ್ ಆಗುತ್ತಿತ್ತು. ಹೀಗಾಗಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಕೂಲಂಕುಶವಾಗಿ ನಡೆಸಿದ ಪರಿಶೀಲನೆ ಬಳಿಕ ಇದು ಹೈದರಾಬಾದ್ ಮೂಲದ ಟಾಟ ಇನ್ಸ್ಟಿಟ್ಯೂಟ್ ಆಫ್ ಫಂಡಮೆAಟಲ್ ರಿಸರ್ಚ್ ಸೆಂಟರ್ ಹಾರಿಸಿದ್ದ ಉಪಕರಣ ಅನ್ನೋದು ಗೊತ್ತಾಗಿದೆ. ಹವಾಮಾನ ಹಾಗೂ ವಾತಾವರಣದ ಅಧ್ಯಯನಕ್ಕಾಗಿ ಇದನ್ನು ಉಡಾವಣೆ ಮಾಡಲಾಗಿದ್ದು, ನಿಯಂತ್ರಣ ಕಳೆದುಕೊಂಡು ಭೀಮಾತೀರದ ಮರಗೂರಿನ ಹೊಲಕ್ಕೆ ಬಿದ್ದಿತ್ತು. ಈ ಬಗ್ಗೆ ವಿಯಯಪುರ ಜಿಲ್ಲಾಡಳಿತ ಸಂಶೋಧನಾ ಸಂಸ್ಥೆಗೆ ಮಾಹಿತಿ ನೀಡಿದ್ದು, ಅಲ್ಲಿನ ವಿಜ್ಞಾನಿಗಳು ಈ ಉಪಕರಣ ತೆಗೆದುಕೊಂಡು ಹೋಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…